ನವದೆಹಲಿ: ಕ್ಷಯರೋಗ ಮುಕ್ತ ಭಾರತವನ್ನು ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿಯವರ ಆಶಯ 2025 ರ ವೇಳೆಗೆ ಪೂರ್ಣವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.
ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗಾಗಿ ಸ್ವಯಂಪ್ರೇರಿತ ಕ್ರೌಡ್-ಫಂಡಿಂಗ್ ಕುರಿತು ಚರ್ಚಿಸಲು ನಿನ್ನೆ ಕಾರ್ಪೊರೇಟ್ ಸಂಸ್ಥೆಗಳೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಡಾ.ಹರ್ಷ ವರ್ಧನ್, ಪೋಲಿಯೊದಂತೆಯೇ ಕ್ಷಯರೋಗವನ್ನು ಕೂಡ ಭಾರತದಿಂದ ನಿರ್ಮೂಲನೆ ಮಾಡಲಾಗುವುದು ಎಂದು ಪುನರುಚ್ಛರಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು, ದೇಶದೊಳಗಿನ ಅಪರೂಪದ ಕಾಯಿಲೆಗಳಿಗೆ ರೋಗನಿರ್ಣಯ ಮತ್ತು ಚಿಕಿತ್ಸಕ ಮಧ್ಯಸ್ಥಿಕೆಗಳ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವ ವಾತಾವರಣವನ್ನು ಸೃಷ್ಟಿಸಲು ಅನುಕೂಲವಾಗುವಂತೆ ಸರ್ಕಾರ ಕೈಗೊಂಡ ವಿವಿಧ ಕ್ರಮಗಳನ್ನು ವಿವರಿಸಿದರು. ಆರೋಗ್ಯ ಸಚಿವಾಲಯವು ರಚಿಸಿದ ಕ್ರೌಡ್-ಫಂಡಿಂಗ್ಗಾಗಿನ ರಾಷ್ಟ್ರೀಯ ಡಿಜಿಟಲ್ ಪೋರ್ಟಲ್ ಬಗ್ಗೆ ಅವರು ಪ್ರಸ್ತಾಪಿಸಿದ್ದು, ಇದು ಸಮಾಜದ ವಿವಿಧ ವರ್ಗಗಳ ದಾನಿಗಳಿಗೆ ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡಲು ದಾರಿ ಮಾಡಿಕೊಡುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.