ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ವೇಳೆ ದೆಹಲಿ ಸರ್ಕಾರ ತನ್ನ ಆಮ್ಲಜನಕದ ಬೇಡಿಕೆಯನ್ನು ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚಿಸಿತ್ತು ಎಂಬ ಬಗ್ಗೆ ಸುಪ್ರೀಂಕೋರ್ಟ್ ನೇಮಿಸಿದ ಆಕ್ಸಿಜನ್ ಆಡಿಟ್ ಸಮಿತಿಯ ವರದಿಯು ಎಎಪಿ ಮತ್ತು ಬಿಜೆಪಿ ನಡುವೆ ಮಾತಿನ ಜಟಾಪಟಿಗೆ ವೇದಿಕೆ ಸೃಷ್ಟಿಸಿದೆ.
ಅಂತಹ ಯಾವುದೇ ವರದಿ ಅಸ್ತಿತ್ವದಲ್ಲಿಲ್ಲ ಎಂದು ಎಎಪಿ ಹೇಳಿದರೆ, ಆಡಳಿತಾರೂಢ ಬಿಜೆಪಿ ಇಂತಹ ಸೂಕ್ಷ್ಮ ವಿಷಯದ ಬಗ್ಗೆ ದೆಹಲಿ ಸರ್ಕಾರ ರಾಜಕೀಯ ಮಾಡಿದೆ ಎಂಬ ಆರೋಪ ಮಾಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಸಂಸದ ಮತ್ತು ಅದರ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, “ಕೋವಿಡ್ ಉತ್ತುಂಗದಲ್ಲಿದ್ದಾಗ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಸರ್ಕಾರ ಆಮ್ಲಜನಕ ಪೂರೈಕೆಯನ್ನು ರಾಜಕೀಯಗೊಳಿಸಿದ್ದು ನಿಜಕ್ಕೂ ನಂಬಲಸಾಧ್ಯ ಕೃತ್ಯ” ಎಂದಿದ್ದಾರೆ.
“ಇದು ಕೀಳು ರಾಜಕೀಯ. ವರದಿಯಲ್ಲಿ ಆಕ್ಸಿಜನ್ ಆಡಿಟ್ ಸಮಿತಿ ಮಂಡಿಸಿದ ಅಂಕಿ ಅಂಶಗಳು ಆಘಾತಕಾರಿಯಾಗಿವೆ’ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ.
ಆಕ್ಸಿಜನ್ ಲೆಕ್ಕಪರಿಶೋಧನಾ ಸಮಿತಿಯ ಯಾವುದೇ ವರದಿ ಅಸ್ತಿತ್ವದಲ್ಲಿ ಇಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ ಕೆಲವೇ ಗಂಟೆಗಳಲ್ಲಿ ಸಂಬಿತ್ ಪಾತ್ರ ಹೇಳಿಕೆ ಹೊರಬಿದ್ದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.