ನವದೆಹಲಿ: ಭಾರತದಲ್ಲಿ ವೈದ್ಯರ ದಿನವನ್ನು ಪ್ರತಿವರ್ಷ ಜುಲೈ 1 ರಂದು ಆಚರಿಸಲಾಗುತ್ತದೆ. ಜನರ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತಿರುವ ವೈದ್ಯರ ಸೇವೆ ಮತ್ತು ತ್ಯಾಗವನ್ನು ಸ್ಮರಿಸಬೇಕಾದ ದಿನ ಇದಾಗಿದೆ.
ಕೋವಿಡ್ ಸಾಂಕ್ರಾಮಿಕ ರೋಗವು ಕಾಣಿಸಿಕೊಂಡ ಬಳಿಕ ಭಾರತದಲ್ಲಿ ಮಾತ್ರವಲ್ಲದೇ ಇಡೀ ವಿಶ್ವದಲ್ಲಿ ವೈದ್ಯರ ಬಗೆಗಿನ ಗೌರವ ಇಮ್ಮಡಿಯಾಗಿದೆ. ಆರೋಗ್ಯ ಕ್ಷೇತ್ರದ ಮೇಲೆ ಬಿದ್ದ ತೀವ್ರ ಒತ್ತಡದ ನಡುವೆಯೂ ವೈದ್ಯರು ತಮ್ಮ ಸಾಮರ್ಥ್ಯವನ್ನು ಮೀರಿ ಜನರ ಜೀವ ಕಾಪಾಡಲು ಶ್ರಮಿಸಿದ್ದಾರೆ.
ಡಾ.ಬಿದನ್ ಚಂದ್ರ ರಾಯ್ ಅವರ ಸೇವೆಯನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಭಾರತದಲ್ಲಿ ಆಚರಣೆ ಮಾಡಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ ವೈದ್ಯರ ಸೇವೆಯನ್ನು ಸ್ಮರಿಸಿದ್ದಾರೆ ಮತ್ತು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
“ವೈದ್ಯರ ದಿನದಂದು, ಎಲ್ಲಾ ವೈದ್ಯರಿಗೆ ನನ್ನ ಶುಭಾಶಯಗಳು. ಔಷಧ ಜಗತ್ತಿನಲ್ಲಿ ಭಾರತದ ಪ್ರಗತಿಗಳು ಶ್ಲಾಘನೀಯ ಮತ್ತು ನಮ್ಮ ಭೂಮಿಯನ್ನು ಆರೋಗ್ಯಕರವಾಗಿಸಲು ಸಹಕಾರಿಯಾಗಿದೆ” ಎಂದಿದ್ದಾರೆ.
On Doctors Day, my greetings to all doctors. India's strides in the world of medicine are commendable and have contributed to making our planet healthier.
Here is what I said during #MannKiBaat a few days ago. pic.twitter.com/KWw3WTrVAA
— Narendra Modi (@narendramodi) July 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.