ನವದೆಹಲಿ: ದೇಶದಲ್ಲಿ ಪ್ರಧಾನಿ ಮೋದಿ ಅವರ ಸಮರ್ಥ ಆಡಳಿತದ ಕಾರಣದಿಂದ ಕೊರೋನಾ ಕಪಿಮುಷ್ಟಿಯಿಂದ ದೇಶ ಹೊರಬರುತ್ತಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.
ಉತ್ತರ ಪ್ರದೇಶದ ರಾಂಪುರ್ನಲ್ಲಿ ರಾಡಿಕೋ ಖೈತಾನ್ ಸಂಸ್ಥೆ ಸ್ಥಾಪಿಸಿರುವ ಆಮ್ಲಜನಕ ಸ್ಥಾವರವೊಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊರೋನಾ ಮಹಾಮಾರಿಯನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ತೆಗೆದುಕೊಂಡ ಕ್ರಮಗಳು ಉತ್ತಮ ರೀತಿಯ ಫಲಿತಾಂಶ ನೀಡಿವೆ. ಸಾರ್ವಜನಿಕರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮದ ದೃಷ್ಟಿಯಿಂದ ಪ್ರಧಾನಿ ಮೋದಿ ಅವರ ಬದ್ಧತೆ ಇದರಿಂದ ತಿಳಿದು ಬಂದಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸಾಂಕ್ರಾಮಿಕ ಸಂಕಷ್ಟದಿಂದ ಭಾರಚ ಹೊರಬರುತ್ತಿದೆ. ಆಡಳಿತವು ಒದಗಿಸುವ ಉತ್ತಮ ಸೌಲಭ್ಯಗಳು ಮತ್ತು ಸಂಪನ್ಮೂಲಗಳು, ಸಮಾಜದ ಮನ್ನೆಚ್ಚರಿಕೆ ಮತ್ತು ಸ್ವಯಂ ಸಂಯಮಗಳಿಂದಲಷ್ಟೇ ಕೊರೋನಾ ಸೋಂಕನ್ನು ಸಂಪೂರ್ಣವಾಗಿ ಹೊಡೆದೋಡಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ. ಹಾಗೆಯೇ ಕೊರೋನಾ ಬಳಿಕ ದೇಶದಲ್ಲಿ ಆಮ್ಲಜನಕ ಉತ್ಪಾದನಾ ಶಕ್ತಿಯೂ ಏರಿಕೆಯಾಗಿದೆ. ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಪ್ರಧಾನಿ ಮೋದಿ ಅವರೂ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ನಖ್ವಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.