ಗಾಂಧೀನಗರ: ಗುಜರಾತ್ನ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಘರ್ ವಾಪಸಿ ಕಾರ್ಯಕ್ರಮದಲ್ಲಿ ಧರ್ಮಪುರ ಮತ್ತು ಕಪ್ರದ ತಾಲೂಕುಗಳ 21 ಕುಟುಂಬಗಳು ಮತ್ತೆ ಮಾತೃಧರ್ಮ ಹಿಂದೂ ಧರ್ಮಕ್ಕೆ ಮರಳಿವೆ.
ಈ ಕುಟುಂಬಗಳು ಹಲವು ಆಮಿಷಗಳಿಗೆ ಬಲಿಯಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದವು. ಇದೀಗ ವಾಪಿಯ ಬಾಪಾ ಸೀತಾರಾಮ್ ಆಶ್ರಮದಲ್ಲಿ ಈ ಕುಟುಂಬಗಳು ಮತ್ತೆ ಹಿಂದೂ ಧರ್ಮಕ್ಕೆ ಮರಳಿವೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ವಾಪಿಯ ಬಿಜೆಪಿ ಶಾಸಕ ಕನುಭಾಯ್ ದೇಸಾಯಿ ಮಾತನಾಡಿದ್ದು, ವಿಹಿಂಪ ಆಯೋಜಿಸಿದ್ದ ಹಿಂದೂ ಜಾಗರಣ್ ಮಂಚ್ ಕಾರ್ಯಕ್ರಮದಲ್ಲಿ ಹಿಂದೂ ಸಮಾಜಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಚರ್ಚೆ ನಡೆದಿದೆ. ಹಾಗೆಯೇ ಬಲವಂತದ ಧಾರ್ಮಿಕ ಮತಾಂತರ ವಿರುದ್ಧ ಸರ್ಕಾರ ಜಾರಿಗೊಳಿಸಿರುವ ಕಾನೂನುಗಳ ಬಗೆಗೂ ಜಾಗೃತಿ ಮೂಡಿಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಈ ಮತಾಂತರದ ಬಗ್ಗೆ ಮತ್ತೆ ಮಾತೃ ಧರ್ಮಕ್ಕೆ ಮರಳಿದ ವ್ಯಕ್ತಿಯೋರ್ವರು ಮಾತನಾಡಿದ್ದು, ಆಮಿಷಕ್ಕೆ ತುತ್ತಾಗಿ ಮತಾಂತರವಾಗಿರುವುದಾಗಿ ಒಪ್ಪಿಕೊಂಡಿದ್ದಾರೆ. ನಮ್ಮ ತೊಂದರೆಗಳನ್ನು ನಿವಾರಿಸಿಕೊಳ್ಳಲು ಐದು ವರ್ಷಗಳ ಹಿಂದೆ ಮತಾಂತರವಾಗಿದ್ದೆವು. ಆ ಬಳಿಕವೂ ನಮ್ಮ ಸಮಸ್ಯೆ ಜೀವಂತವಾಗಿಯೇ ಇದೆ ಎಂದು ಹೇಳಿದ್ದಾರೆ.
ಇದಕ್ಕೆ ಪೂರಕ ಎಂಬಂತೆ ಉತ್ತರ ಪ್ರದೇಶದಲ್ಲಿಯೂ ಅನ್ಯ ಧರ್ಮಕ್ಕೆ ಮತಾಂತರವಾಗಿದ್ದ ಮೂವರು ಯುವಕರು ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ಹಿಂದೂ ಜಾಗರಣ್ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಮೂವರು ಯುವಕರು ಹಿಂದೂ ಧರ್ಮಕ್ಕೆ ಮರಳಿದ್ದಾರೆ.
ಬಲವಂತವಾಗಿ ಅನ್ಯ ಧರ್ಮಕ್ಕೆ ಮತಾಂತರವಾಗುತ್ತಿರುವ ಜನರ ರಕ್ಷಣೆ ಮತ್ತು ಅವರನ್ನು ಮತ್ತೆ ಮಾತೃ ಧರ್ಮ ಹಿಂದೂ ಧರ್ಮಕ್ಕೆ ಮರಳುವಂತೆ ಮಾಡುವ ನಿಟ್ಟಿನಲ್ಲಿ ವಿಹಿಂಪ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.