ಲಕ್ನೋ: ಸಂಸ್ಕೃತ ಭಾಷೆಯನ್ನು ಪ್ರಚುರ ಪಡಿಸಲು, ವೈದಿಕ ಶಿಕ್ಷಣವನ್ನು ವಿದೇಶಿಗರಿಗೆ ಕಲಿಯುವುದಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೂರಕ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಉತ್ತರ ಪ್ರದೇಶದ ಸರ್ಕಾರ ಚಿಂತನೆ ನಡೆಸುತ್ತಿದೆ.
ಇದಕ್ಕಾಗಿ ಉತ್ತರ ಪ್ರದೇಶದ ಸಂಸ್ಕೃತ ಸಂಸ್ಥಾನ ವಿದೇಶೀ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಸಂಸ್ಕೃತ, ಆಚರಣೆಗಳನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಹೆಜ್ಜೆ ಮುಂದಿರಿಸಿದೆ. ವಿದೇಶಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಶ್ಲೋಕಗಳು, ಆಚರಣೆಗಳನ್ನು ಅಧ್ಯಯನ ನಡೆಸಲು ಅನುಕೂಲವಾಗುವಂತೆ ವಾಟ್ಸಾಪ್ ಮೂಲಕ ಹೊಸ ಸಹಾಯವಾಣಿಯೊಂದನ್ನು ಸ್ಥಾಪಿಸಿ, ಆ ಮೂಲಕ ಅಧ್ಯಯನಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಸಂಸ್ಥಾನ ಯೋಜನೆ ಹಾಕಿಕೊಂಡಿದೆ.
ಈ ಬಗ್ಗೆ ಸಂಸ್ಥಾನದ ವಾಚಸ್ಪತಿ ಮಿಶ್ರಾ ಮಾತನಾಡಿದ್ದು, ವಿದೇಶಿ ವಿದ್ಯಾರ್ಥಿಗಳು ಸಂಸ್ಕೃತದ ಮೂಲಭೂತ ಅಂಶಗಳನ್ನು ಕಲಿಯುವುದು, ಪ್ರತ್ಯೇಕ ಶಿಕ್ಷಕರಿಂದ ಆಧ್ಯಾತ್ಮಿಕತೆ, ಆಚರಣೆ ಸೇರಿದಂತೆ ಇನ್ನಿತರ ವೈದಿಕ ವಿಚಾರಗಳನ್ನು ಕಲಿಯುವುದಕ್ಕಾಗಿ ಇದನ್ನು ಆರಂಭಿಸಲಾಗಿದೆ. ಸಂಸ್ಕೃತ ಕಲಿಕೆ ಮತ್ತು ಭಾಷಣಕ್ಕೆ ಈಗಿರುವ ಆನ್ಲೈನ್ ಸೌಲಭ್ಯವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸಂಸ್ಥಾನ 47 ದೈನಂದಿನ ತರಗತಿಗಳನ್ನು ನಡೆಸುತ್ತಿದ್ದು, 8000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ನೋಂದಣಿ ಮಾಡಿಸಿಕೊಂಡಿದ್ದಾರೆ. 1553 ವಿದ್ಯಾರ್ಥಿಗಳು ವರ್ಚುವಲ್ ಮೂಲಕ ದೈನಂದಿನ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಮಿಸ್ಡ್ ಕಾಲ್ ನೀಡುವ ಮೂಲಕ ತರಗತಿಗೆ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.