ಲಕ್ನೋ: ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ ಎರಡನೇ ಹಂತ ಉಜ್ವಲಾ 2.0 ಗೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಿದರು.
ವರ್ಚುವಲ್ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ಉತ್ತರ ಪ್ರದೇಶದ ಮಹೋಬಾ ಪಟ್ಟಣದ 10 ಮಂದಿ ಬಡ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ಗಳ ವಿತರಣೆ ನಡೆಸಿದರು.
ಆ ಬಳಿಕ ಮಾತನಾಡಿದ ಅವರು, ದೇಶದ ಎಲ್ಲಾ ಸಂಪನ್ಮೂಲಗಳು ದೇಶದ ಎಲ್ಲರಿಗೂ ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಈ ವರ್ಷ 75 ನೇ ಸ್ವಾತಂತ್ರ್ಯ ದಿನವನ್ನು ನಾವು ಆಚರಿಸುತ್ತಿದ್ದೇವೆ. ಕಳೆದ ಏಳೂವರೆ ದಶಕಗಳ ಬಗ್ಗೆ ಅವಲೋಕನ ನಡೆಸಿದಾಗ, ನಾವು ಬಹಳ ಹಿಂದೆಯೇ ಅಭಿವೃದ್ಧಿ ಕಾಣಬೇಕಿತ್ತು ಎಂಬ ಭಾವನೆ ಮೂಡುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕುಡಿಯುವ ನೀರು, ರಸ್ತೆ, ಆಸ್ಪತ್ರೆ, ವಿದ್ಯುತ್, ಶಾಲೆ, ಅಡುಗೆ ಅನಿಲ, ಮನೆ ಸೇರಿದಂತೆ ಇನ್ನಿತರ ಮೂಲಸೌಕರ್ಯಗಳನ್ನು ಪಡೆಯಲು ಜನರು ಅನೇಕ ವರ್ಷಗಳ ವರೆಗೆ ಕಾಯಬೇಕಾಯಿತು. ಮಹಿಳೆಯರು ಹೆಚ್ಚು ಸಮಸ್ಯೆ ಅನುಭವಿಸಬೇಕಾಯಿತು. ಇದು ದುರಾದೃಷ್ಟಕರ ಎಂದು ಅವರು ಹೇಳಿದರು. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಪೂರಕ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.