ಬೆಂಗಳೂರು: ಕೈಗಾರಿಕೆಗಳ ಬೇಡಿಕೆ, ಉದ್ಯೋಗ ಮಾರುಕಟ್ಟೆಗಳಿಗನುಗುಣವಾಗಿ ಮಾನವ ಸಂಪನ್ಮೂಲ ಒದಗಿಸುವ ನಿಟ್ಟಿನಲ್ಲಿ ಎಂಟು ಹೊಸ ಡಿಪ್ಲೊಮಾ ಕೋರ್ಸ್ಗಳಿಗೆ ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ಚಾಲನೆ ನೀಡಿದರು.
ರಾಜ್ಯದಲ್ಲಿ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ, ಕೈಗಾರಿಕೆಗಳಿಗೆ ಉತ್ಕೃಷ್ಟ ಮಾನವ ಸಂಪನ್ಮೂಲ ಒದಗಿಸುವುದು ಈ ಹೊಸ ಕೋರ್ಸ್ಗಳ ಉದ್ದೇಶ. ಡಿಪ್ಲೊಮಾದಲ್ಲಿ ಪ್ರಸ್ತುತ 33 ಕೋರ್ಸ್ಗಳಿದ್ದು, ಅವುಗಳಲ್ಲಿ ಹಳೆಯ, ಅಪ್ರಸ್ತುತ ಕೋರ್ಸ್ಗಳನ್ನು ಕೈಬಿಡಲಾಗಿದೆ. ಹೊಸ ಕೋರ್ಸ್ಗಳನ್ನು ಅಳವಡಿಸಲಾಗಿದೆ. ಈ ಎಂಟು ಹೊಸ ಕೋರ್ಸ್ಗಳು ಈ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.
ಆಲ್ಟರ್ನೇಟಿವ್ ಎನರ್ಜಿ ಟೆಕ್ನಾಲಜಿ, ಸೈಬರ್ ಸೆಕ್ಯುರಿಟಿ, ಆಹಾರ ಸಂಸ್ಕರಣೆ ಮತ್ತು ಸಂರಕ್ಷಣೆ, ಪ್ರವಾಸೋದ್ಯಮ, ಕ್ಲೌಡ್ ಕಂಪ್ಯೂಟಿಂಗ್, ಅಟೋಮೇಷನ್ ಮತ್ತು ರೊಬೋಟಿಕ್ಸ್, ನಿರ್ದೇಶನ, ಚಿತ್ರಕಥೆ ರಚನೆ, ಟಿವಿ ಕಾರ್ಯಕ್ರಮ ನಿರ್ಮಾಣ, ಸೈಬರ್ ಭೌತಿಕ ವ್ಯವಸ್ಥೆ ಮತ್ತು ಭದ್ರತೆ ಕೋರ್ಸ್ಗಳನ್ನು ಹೊಸದಾಗಿ ಸೇರಿಸಲಾಗಿದೆ. ಈ ಕೋರ್ಸ್ಗಳನ್ನು ಗೌರಿಬಿದನೂರು, ಶಿರಾಳಕೊಪ್ಪ, ಕೂಡ್ಲಿಗಿ, ರಬಕವಿ, ಬನಹಟ್ಟಿ, ಔರಾದ್, ಬೆಂಗಳೂರು ಎಸ್ಜೆ. ಪಾಲಿಟೆಕ್ನಿಕ್, ಚನ್ನಗಿರಿ, ಕೊಪ್ಪ, ಹೊನ್ನಾಳಿ, ಕಾಪು ಕಾಲೇಜುಗಳಲ್ಲಿ ಆರಂಭಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹೊಸ ಡಿಪ್ಲೊಮಾ ಕೋರ್ಸುಗಳು!
ಉದ್ಯಮ 4.0 ಅಪೇಕ್ಷಿಸುವ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುವಂತಹ ಹೊಸ ಉದಯೋನ್ಮುಖ ಕ್ಷೇತ್ರಗಳಲ್ಲಿ 2021-22ನೇ ಸಾಲಿನಲ್ಲಿ ಹೊಸ ಕೋರ್ಸುಗಳಿಗೆ ಪ್ರವೇಶಾತಿ ಆಗಲಿದೆ. ನಮ್ಮ ಯುವಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು.@CMofKarnataka @KarnatakaVarthe pic.twitter.com/IcRpQJRXaN
— Dr. Ashwathnarayan C. N. (@drashwathcn) August 12, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.