ಶಿಲ್ಲಾಂಗ್: ಮೇಘಾಲಯದ ಪೂರ್ವ ಖಾಸಿಹಿಲ್ಸ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್ಕೌಂಟರ್ಗೆ ನಿಷೇಧಿತ ಬಂಡುಕೋರ ಸಂಘಟನೆಯ ಮಾಜಿ ಪ್ರಧಾನ ಕಾರ್ಯದರ್ಶಿಯೋರ್ವನ ವಧೆಯಾಗಿದೆ.
ಹೈನಿವ್ಟ್ರೆಪ್ ನ್ಯಾಷನಲ್ ಲಿಬರೇಶನ್ ಕೌನ್ಸಿಲ್ ಬಂಡುಕೋರರ ಸಂಘಟನೆಯ ಮಾಜಿ ಪ್ರಧಾನ ಕಾರ್ಯದರ್ಶಿ ಚೆಸ್ಟೆರ್ಫೀಲ್ಡ್ ತಂಗ್ಖಿವ್ ಎಂಬಾತನನ್ನು ವಧಿಸಿರುವುದಾಗಿ ಮೂಲಗಳು ತಿಳಿಸಿವೆ. ಈತ 2018 ರಲ್ಲಿ ಮೇಘಾಲಯದ ಉಪಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್ಸಾಂಗ್ ಮುಂದೆ ಶರಣಾಗತನಾಗಿದ್ದ.
ಖ್ಲಿರಿಯಾತ್ನಲ್ಲಿ ಈ ಹಿಂದೆ ನಡೆದಿದ್ದ ಐಇಡಿ ಸ್ಪೋಟದಲ್ಲಿ ತಂಗ್ಖಿವ್ ಕೈವಾಡವಿದ್ದು, ಇದಕ್ಕೆ ಸಂಬಂಧಿಸಿದಂತೆ ಪೊಲೀಸರಲ್ಲಿ ಸಾಕ್ಷ್ಯಗಳಿವೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತನ ಮನೆಯ ಮೇಲೆ ಇಂದು ದಾಳಿ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಆತ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಆತನ ಮೇಲೆ ಗುಂಡು ಹಾರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಗಾಯಗೊಂಡ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ. ಆತನ ಮನೆಯಿಂದ ಮೊಬೈಲ್, ಲ್ಯಾಪ್ಟಾಪ್, ಬಂದೂಕು, ಡಿಜಿಟಲ್ ದಾಖಲೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಹಾಗೆಯೇ ಆತನ ಇಬ್ಬರು ಸಹಚರರನ್ನು ಸಹ ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.