ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸೆಗೆ ಸಂಬಂಧಿಸಿದಂತೆ ವರದಿ ನೀಡಲು ಸಿಬಿಐ, ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ.
ಚುನಾವಣೆಯ ಬಳಿಕ ರಾಜ್ಯದಲ್ಲಿ ನಡೆದ ಕೊಲೆ, ಕೊಲೆ ಯತ್ನ, ಹಲ್ಲೆ, ಅತ್ಯಾಚಾರ ಸೇರಿದಂತೆ ಇನ್ನಿತರ ಕ್ರೌರ್ಯಗಳ ಬಗ್ಗೆ ವಿವರಣೆ ನೀಡುವಂತೆ ಈ ಪತ್ರದಲ್ಲಿ ಸಿಬಿಐ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ. ಹಿಂಸಾಚಾರದ ಸಂದರ್ಭದಲ್ಲಿ ಕಒಲೆ, ಮಹಿಳೆಯರ ಮೇಲಿನ ದೈಹಿಕ ದೌರ್ಜನ್ಯಗಳ ಬಗ್ಗೆ ತಿಳಿಸುವಂತೆ ಸಿಬಿಐ ಹೇಳಿದೆ.
ಪಶ್ಚಿಮ ಬಂಗಾಳದ ಚುನಾವಣಾ ಸಂದರ್ಭದ ಹಿಂಸೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಸೂಚಿಸಿತ್ತು. ಈ ನಿಟ್ಟಿನಲ್ಲಿ ತನಿಖೆ ಕೈಗೊಂಡಿರುವ ಸಿಬಿಐ ಈ ಬಗ್ಗೆ ಸಮಗ್ರ ವಿವರಣೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ತಿಳಿಸಿದೆ. ಈ ತನಿಖೆಗಾಗಿ ಸಿಬಿಐ ಈಗಾಗಲೇ ನಾಲ್ಕು ತಂಡಗಳನ್ನು ಸಹ ರಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.