ಬೆಂಗಳೂರು/ಬಳ್ಳಾರಿ: ‘ಧನಲಾಭ’ ಹೆಸರಿನಲ್ಲಿ ನಕಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಜಾಲವನ್ನು ಕೃಷಿ ವಿಚಕ್ಷಣಾ ದಳ ಪತ್ತೆ ಮಾಡಿದೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿ ಗ್ರಾಮದ ಕುಡಿತಿನಿ ರಸ್ತೆಯಲ್ಲಿ ಅನಧಿಕೃತವಾಗಿ ಲಾರಿಯಲ್ಲಿ ರಸಗೊಬ್ಬರವಲ್ಲದ ಪದಾರ್ಥವನ್ನು ರಸಗೊಬ್ಬರವೆಂದು ಮಾರಾಟ ಮಾಡುತ್ತಿದ್ದ “ಧನಲಾಭ” ಹೆಸರಿನ ನಕಲಿ ರಸಗೊಬ್ಬರವನ್ನು ಬಳ್ಳಾರಿ ಜಿಲ್ಲೆಯ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಶಿವಯೋಗಿ ಅಗ್ರಿ ಸೈನ್ಸ್ ಪ್ರೈವೇಟ್ ಲಿಮಿಟೆಡ್ ವಿಜಯಪುರ ಈ ಕಂಪೆನಿಯು ತಯಾರಿಸಿದ “ಧನಲಾಭ” ಹೆಸರಿನ ರಸಗೊಬ್ಬರವಲ್ಲದ ಪದಾರ್ಥವನ್ನು ಹುಬ್ಬಳ್ಳಿಯ ಜೈ ಕಿಸಾನ್ ಗ್ರೀನ್ ಕೇರ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಕಂಪೆನಿಯು ರಸ್ತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 91 ಸಾವಿರ ರೂ. ಮೌಲ್ಯದ 50 ಕೆ.ಜಿ. ಗಳಷ್ಟು,.260 ಚೀಲ ನಕಲಿ ರಸಗೊಬ್ಬರ ಹಾಗೂ ನಕಲಿ ರಸಗೊಬ್ಬರ ಸಾಗಾಣಿಕೆಗೆ ಬಳಸಲ್ಪಡುತ್ತಿದ್ದ ಕೆ.ಎ. 25 ಡಿ. 9873 ಸಂಖ್ಯೆಯ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಹೀಗೆ ನಕಲಿ ರಸಗೊಬ್ಬರ ತಯಾರಿಸುತ್ತಿದ್ದ ಹಾಗೂ ಮಾರಾಟ ಮಾಡುತ್ತಿದ್ದ ಕಂಪೆನಿಗಳ ಮೇಲೆ ಕುಡಿತಿನಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕುರಗೊಡು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ದೇವರಾಜ , ಬಳ್ಳಾರಿ ಸಹಾಯಕ ಕೃಷಿ ನಿರ್ದೇಶಕ ಬಿ.ಆರ್. ಪಾಲಾಕ್ಷಿ ಗೌಡ, ಕೃಷಿ ವಿಚಕ್ಷಣಾ ದಳದ ನಾಗರಾಜ್, ಸಹಾಯಕ ಕೃಷಿ ನಿರ್ದೇಶಕ ಗವಿಸಿದ್ದಪ್ಪ ಸೇರಿದಂತೆ ಮತ್ತಿತ್ತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.