ನವದೆಹಲಿ: ಬಿಎಸ್ಎಫ್ ಯೋಧರು ಭಾರತ – ಬಾಂಗ್ಲಾದೇಶ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಬಾಂಗ್ಲಾದೇಶದ ಕಳ್ಳಸಾಗಾಣಿಕೆದಾರರು ಸುತ್ತುವರಿದಿದ್ದು, ಈ ಸಂದರ್ಭದಲ್ಲಿ ಯೋಧರು ಹಾರಿಸಿದ ಗುಂಡಿಗೆ ಇಬ್ಬರು ಕಳ್ಳರ ಸಂಹಾರವಾಗಿದೆ.
ಹಾಗೆಯೇ ಈ ಘಟನೆಯ ಬಳಿಕ ಬಿಜಿಬಿಗೆ ಬಿಎಸ್ಎಫ್ ಯೋಧರು ತಮ್ಮ ಬಲವಾದ ಪ್ರತಿಭಟನೆಯನ್ನು ಸಹ ತಿಳಿಸಿದ್ದಾರೆ. ಬಾಂಗ್ಲಾದೇಶದ ಕಳ್ಳಸಾಗಾಣಿಕೆದಾರರು ಗಸ್ತಿನಲ್ಲಿದ್ದ ಬಿಎಸ್ಎಫ್ ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಇದರಿಂದಾಗಿ ಗುಂಡು ಹಾರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಬ್ಬರು ದುಷ್ಟರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಚಂಗ್ರಬಂಧ ಗಡಿಯ ಬಳಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 18 ರಿಂದ 20 ಮಂದಿ ಕಳ್ಳಕಾಕರು ಯೋಧರನ್ನು ಸುತ್ತುವರಿದಿದ್ದು, ಈ ಸಂದರ್ಭದಲ್ಲಿ ಅಲ್ಲಿಂದ ಹಿಂದಿರುಗುವಂತೆ ಅವರಿಗೆ ಎಚ್ಚರಿಕೆ ನೀಡಲಾಯಿತು. ಆದರೂ ಅದಕ್ಕೆ ಬೆಲೆ ಕೊಡದ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.