ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಹಿಂದೂ ಅಲ್ಪಸಂಖ್ಯಾತರ ಆರಾಧನಾ ಸ್ಥಳದ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಮತಾಂಧರ ಗುಂಪು ಸೋಮವಾರ ಕೃಷ್ಣ ಜನ್ಮಾಷ್ಟಮಿಯಂದು ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ಹಿಂದೂ ದೇವಸ್ಥಾನವನ್ನು ಧ್ವಂಸಗೊಳಿಸಿದೆ ಮತ್ತು ಶ್ರೀಕೃಷ್ಣನ ಮೂರ್ತಿಯನ್ನು ಭಗ್ನಗೊಳಿಸಿದೆ.
ಜನ್ಮಾಷ್ಟಮಿಯನ್ನು ಆಚರಿಸಲು ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲೇ ಸಿಂಧ್ನ ಸಂಘರ್ ಜಿಲ್ಲೆಯ ವಾರ್ಹ್ಯಾ ಗ್ರಾಮದಲ್ಲಿನ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ, ಇಸ್ಲಾಂ ಮತಾಂಧರ ಗುಂಪೊಂದು ಪಂಜಾಬ್ ಪ್ರಾಂತ್ಯದ ರಹೀಮ್ ಯಾರ್ ಖಾನ್ ಜಿಲ್ಲೆಯ ಭೋಂಗ್ ಸಿಟಿಯಲ್ಲಿನ ದೇವಸ್ಥಾನವನ್ನು ಭಾಗಶಃ ಸುಟ್ಟುಹಾಕಿದೆ ಮತ್ತು ಅಲ್ಲಿನ ಮೂರ್ತಿಗಳನ್ನು ಭಗ್ನಗೊಳಿಸಿದೆ.
“ಮುಸ್ಲಿಂಯೇತರರ ಆರಾಧನಾ ಸ್ಥಳಗಳನ್ನು ರಕ್ಷಿಸುವಲ್ಲಿ ಪಾಕಿಸ್ಥಾನ ಸರ್ಕಾರ ಮತ್ತು ಎಲ್ಲಾ ಪ್ರಾಂತೀಯ ಸರ್ಕಾರಗಳು ವಿಫಲವಾಗಿವೆ” ಎಂದು ಪಾಕಿಸ್ತಾನದ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಸದಸ್ಯ ಡಾ.ಜೈಪಾಲ್ ಛಾಬ್ರಿಯಾ ಟ್ವೀಟ್ ಮಾಡಿದ್ದಾರೆ.
ಈ ನಡುವೆ, ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತ ಹಿಂದುಗಳು ಎದುರಿಸುತ್ತಿರುವ ದೌರ್ಜನ್ಯ ಮತ್ತು ತಾರತಮ್ಯದ ಬಗ್ಗೆ ಪ್ರತಿಕ್ರಿಯಿಸಿದ ಪಾಕಿಸ್ಥಾನದ ಮಾನವ ಹಕ್ಕುಗಳ ಕಾರ್ಯಕರ್ತ ರಾಹತ್ ಆಸ್ಟಿನ್ ಅವರು, “ಪಾಕಿಸ್ಥಾನದಲ್ಲಿ ಇಸ್ಲಾಂ ಧರ್ಮವನ್ನು ನಿಂದನೆ ಮಾಡಲಾಗುತ್ತಿದೆ ಎಂಬ ಸುಳ್ಳು ಆರೋಪದ ಮೇರೆಗೆ ಇತರ ಧರ್ಮದವರನ್ನು ಗುಂಪು ಹತ್ಯೆ ಅಥವಾ ಮರಣದಂಡನೆಗೆ ಒಳಪಡಿಸಲಾಗುತ್ತಿದೆ. ಆದರೆ ಮುಸ್ಲಿಮೇತರ ದೇವರು, ಧರ್ಮದ ಮೇಲೆ ನಡೆಯುತ್ತಿರುವ ಅಪರಾಧಗಳಿಗಘ ಶಿಕ್ಷೆಯಾಗುವುದಿಲ್ಲ ” ಎಂದಿದ್ದಾರೆ.
ಒಟ್ಟಿನಲ್ಲಿ ಪಾಕಿಸ್ಥಾನ ಧಾರ್ಮಿಕ ಅಲ್ಪಸಂಖ್ಯಾತರ ಪಾಲಿಗೆ ಪೂರಕವಾಗಿ ಪರಿಣಮಿಸುತ್ತಿದ್ದು, ಜಾಗತಿಕ ಸಮುದಾಯ ಇದರ ಬಗ್ಗೆ ಗಮನವಹಿಸುವ ಅಗತ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.