ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದಾವಣಗೆರೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ ಅವರು ಇಂದು ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಶಾಲೆ, ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಕೇಂದ್ರೀಯ ಗ್ರಂಥಾಲಯವನ್ನು ಉದ್ಘಾಟಿಸಿದರು.
75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರಾದ ಬಿ. ಎಂ. ಶಿವಲಿಂಗಸ್ವಾಮಿ, ಎಚ್. ಮರುಳಸಿದ್ದಪ್ಪ, ತಿರುವಳ್ಳಿ ಶೆಟ್ರ ಸಿದ್ದರಾಮಪ್ಪ ಅವರನ್ನು ಅಮಿತ್ ಶಾ ಅವರು ಸನ್ಮಾನಿಸಿದರು.
ಕರ್ನಾಟಕದ ದಾವಣಗೆರೆಯಲ್ಲಿ ಇಂದು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದೆ.
ಈ ಸಂದರ್ಭದಲ್ಲಿ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸುವ ಹಾಗೂ ಅವರೊಂದಿಗೆ ಸಂವಾದ ನಡೆಸುವ ಸದಾವಕಾಶ ದೊರೆಯಿತು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಅಸಾಮಾನ್ಯ ಕೊಡುಗೆಗೆ ನಾವು ಸದಾ ಚಿರಋಣಿ. pic.twitter.com/Ji4NwXEPcn
— Amit Shah (@AmitShah) September 2, 2021
ಇದಕ್ಕೂ ಮುನ್ನ ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಸೇರಿದಂತೆ ಹಲವು ಕೇಂದ್ರ ಸಚಿವರು ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದಾಗ ಇವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಶಾ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ, ಜೊತೆಗೆ ‘ಬುದ್ಧ- ದ ಸ್ಟೋರಿ ಆಫ್ ಎನ್ಲೈಟ್ಮೆಂಟ್’ ಎಂಬ ಪುಸ್ತಕದ ಉಡುಗೊರೆ ನೀಡಿದರು.
ಬಳಿಕ ವಿಶೇಷ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಿದ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಗೃಹ ಸಚಿವರು, ಲೋಕಸಭಾ ಅಧ್ಯಕ್ಷರು ಸೇರಿದಂತೆ ಇನ್ನುಳಿದಂತೆ ಇಂದು ರಾಜ್ಯಕ್ಕೆ ಆಗಮಿಸಿರುವ ಎಲ್ಲಾ ಕೇಂದ್ರ ಸಚಿವರುಗಳು ಸಂಜೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ಮಗಳ ವಿವಾಹ ಆರತಕ್ಷತೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.