ನವದೆಹಲಿ: ವಿದ್ಯಾರ್ಥಿಗಳ ವಿಭಿನ್ನ ಸಾಮರ್ಥ್ಯ, ಪ್ರತಿಭೆ, ಮನೋವಿಜ್ಞಾನ, ವಿಭಿನ್ನ ಸಾಮಾಜಿಕ ಹಿನ್ನೆಲೆ, ಪರಿಸರವನ್ನು ಹೊಂದಿದ್ದು, ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ತಿಳಿಸಿದರು.
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ನೆನಪಿಸಿಕೊಂಡು, ರಾಷ್ಟ್ರದ 44 ಅತ್ಯುತ್ತಮ ಶಿಕ್ಷಕರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರಶಸ್ತಿ ಪಡೆದ ಶಿಕ್ಷಕರ ಬಗೆಗಿನ ಸಾಕ್ಷ್ಯಚಿತ್ರ ಪ್ರದರ್ಶನ ಸಹ ನಡೆಸಲಾಯಿತು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ವಿಶ್ವಮಟ್ಟದ ತತ್ವಜ್ಞಾನಿ, ವಿದ್ವಾಂಸರಾಗಿ ಪ್ರಸಿದ್ಧಿ ಪಡೆದವರು. ಹಾಗಿದ್ದರೂ ಅವರು ಶಿಕ್ಷಕರಾಗಿಯೇ ತಮ್ಮನ್ನು ಗುರುತಿಸಿಕೊಳ್ಳಲು ಬಯಸಿದ್ದವರು. ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಾಗಿ ಅವರು ಅಳಿಯಲಾಗದ ಛಾಪು ಮೂಡಿಸಿದ್ದಾರೆ ಎಂದು ಕೋವಿಂದ್ ತಿಳಿಸಿದ್ದಾರೆ.
ಹಾಗೆಯೇ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳ ಸಾಂವಿಧಾನಿಕ ಮೌಲ್ಯಗಳು, ನಾಗರಿಕರ ಮೂಲಭೂತ ಕರ್ತವ್ಯಗಳ ಬಗ್ಗೆ ನಿಷ್ಠೆ ಹೊಂದಿರಬೇಕು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಕರ ಕರ್ತವ್ಯ. ವಿದ್ಯಾರ್ಥಿಗಳ ಸೂಕ್ಷ್ಮ ನಡವಳಿಕೆಗಳನ್ನು ಅರ್ಥೈಸಿಕೊಂಡು ಅವರ ಭವಿಷ್ಯವನ್ನು ರೂಪಿಸವಲ್ಲಿ ಶಿಕ್ಷಕರು ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.