ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಅತೀ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿಗೆ ಮತ ಹಾಕಿದ ಮತದಾರರಿಗೆ ಧನ್ಯವಾದಗಳನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂದು ಟವೆಲ್ ಹಾಕಿಟ್ಟುಕೊಂಡವರು, ತಮ್ಮ ಟವೆಲ್ಗಳನ್ನು ತೆಗೆಯಬಹುದು. ಸಿದ್ಧರಾಮಯ್ಯ ಎಲ್ಲೂ ಪ್ರವಾಸ ಮಾಡಿಲ್ಲ. ಡಿಕೆ ಶಿವಕುಮಾರ್ ಅಧ್ಯಕ್ಷರಾಗಿ ಸೋತಿದ್ದಾರೆ ಎಂಬುದಕ್ಕೆ ಈ ಚುನಾವಣೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಜನಮನ್ನಣೆ ದೊರೆತಿದೆ. ಇದರಿಂದ ಬಿಜೆಪಿಯ ಜವಾಬ್ದಾರಿ ಹೆಚ್ಚಿದೆ. ಪ್ರಧಾನಿ ಮೋದಿ ಅವರ ಸಾಧನೆಗಳು, ಯಡಿಯೂರಪ್ಪ ಅವರ ಎರಡು ವರ್ಷದ ಅಭಿವೃದ್ಧಿ ಪರ ಆಡಳಿತ, ಸಿಎಇ ಬೊಮ್ಮಾಯಿ ಅವರ ಅಮೃತ ಕಲ್ಪನೆಯ ಯೋಜನೆಗಳಿಗೆ ಜನರ ಬೆಂಬಲ ದೊರೆತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಾರ್ಯಕರ್ತರ ಶ್ರಮದಿಂದಲೇ ಈ ಗೆಲುವು ದೊರೆತಿದೆ. ಬೆಳಗಾವಿಯಲ್ಲಿ ವಿಪಕ್ಷಗಳಿಗೆ ಒಂದು ಸಂದೇಶ ನೀಡುವ ನಿಟ್ಟಿನಲ್ಲಿ ಅಭ್ಯರ್ಥಿಗಳನ್ನು ಚುನಾವಣೆಗೆ ಇಳಿಸಿದ್ದೆವು. ಇದರಲ್ಲಿ ನಮಗೆ ಯಶಸ್ಸು ದೊರೆತಿದೆ ಎಂದು ಕಟೀಲ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.