ನವದೆಹಲಿ: ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನಿಸ್ಥಾನದಲ್ಲಿ ಅನಿಶ್ಚಿತತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದ ಗೃಹ ವ್ಯವಹಾರಗಳ ಸಚಿವಾಲಯವು ಭಾರತದಲ್ಲಿರುವ ಯಾವುದೇ ಅಫ್ಘಾನ್ ಪ್ರಜೆಯನ್ನು ತನ್ನ ಅನುಮತಿಯಿಲ್ಲದೆ ದೇಶವನ್ನು ತೊರೆಯುವಂತೆ ಆದೇಶಿಸಬಾರದು ಎಂಬ ಸೂಚನೆಯನ್ನು ನೀಡಿದೆ.
ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್ಆರ್ಆರ್ಒ) ಯಾವುದೇ ಅಫ್ಘಾನ್ ಪ್ರಜೆಗಳನ್ನು ದೇಶ ಬಿಡುವಂತೆ ಕೇಳಬಾರದು ಮತ್ತು ಅಂತಹ ಎಲ್ಲ ಪ್ರಕರಣಗಳನ್ನು ಗೃಹ ಸಚಿವಾಲಯದ ಗಮನಕ್ಕೆ ತರಬೇಕು ಎಂಬ ಸೂಚನೆಯನ್ನು ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಅಫ್ಘಾನ್ ಸಂಸತ್ತಿನ ಸದಸ್ಯರಾದ ರಂಗಿನೆ ಕಾರ್ಗರ್ ಅವರನ್ನು ದೆಹಲಿಯಿಂದ ಇಸ್ತಾಂಬುಲ್ಗೆ ಗಡಿಪಾರು ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ. ಇದರ ಬೆನ್ನಲ್ಲೇ, ಸರ್ಕಾರ ಆಕೆಯ ಕ್ಷಮೆ ಕೋರಿತ್ತು.
ಗೃಹ ಸಚಿವಾಲಯದ ನಿರ್ಧಾರವು ತಾಲಿಬಾನ್ ಪಡೆಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ 15 ದಿನಗಳ ನಂತರ ನಡೆದಿದೆ. ಯುನೈಟೆಡ್ ಸ್ಟೇಟ್ಸ್ (ಯುಎಸ್) ನೇತೃತ್ವದ ಪಡೆಗಳು ಆಫ್ಘಾನಿಸ್ತಾನವನ್ನು ತೊರೆದ ಬಳಿಕ ತಾಲಿಬಾನಿಗಳು ಅಪಘಾನಿಸ್ತಾನವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಹಲವಾರು ಅಫ್ಘಾನ್ ಪ್ರಜೆಗಳು ತಾಲಿಬಾನ್ ಕೈಯಲ್ಲಿ ಕಿರುಕುಳ ಮತ್ತು ಭಯವನ್ನು ಎದುರಿಸುತ್ತಿದ್ದು, ಭಾರತದಲ್ಲಿ ಉಳಿಯುವ ಬಯಕೆಯನ್ನು ವ್ಯಕ್ತಪಡಿಸಿರುವುದರಿಂದ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.