ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನ್ಗಳು ಸ್ವಾಧೀನಪಡಿಸಿಕೊಂಡ ಬಳಿಕ ಭಾರತದಲ್ಲಿ ಭದ್ರತಾ ಪರಿಣಾಮದ ಬಗ್ಗೆ ಕಳವಳಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಸ್ಥೆಯು ಭಾರತೀಯ ಭದ್ರತಾ ಪಡೆಗಳಿಗೆ ತಾಲಿಬಾನ್ ಮೇಲೆ ಹೊಸ ತರಬೇತಿ ಮಾಡ್ಯೂಲ್ ಅನ್ನು ರಚಿಸಲು ಮತ್ತು ನಿರ್ವಹಿಸಲು ಸೂಚನೆ ನೀಡಿದೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಬರುತ್ತಿರುವ ಹಿನ್ನೆಲೆಯಲ್ಲಿ ದೇಶದ ಗಡಿಗಳಲ್ಲಿ ಭದ್ರತಾ ಪರಿಣಾಮಗಳು ಬೀರುವ ಸಾಧ್ಯತೆ ಇರುವುದರಿಂದ ಈ ತರಬೇತಿ ಮಾಡ್ಯುಲ್ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಕಳೆದ ತಿಂಗಳು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ವಿಜಯ ಭಾರತದ ಭದ್ರತಾ ಪರಿಸ್ಥಿತಿಯ ಮೇಲೆ ಗಂಭೀರವಾದ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿದ ಭಯೋತ್ಪಾದನೆ ನಿಗ್ರಹಕ್ಕಾಗಿ ನಿಯೋಜಿಸಲಾಗಿರುವ ಗಡಿ ಪಡೆಗಳು ಮತ್ತು ಸಶಸ್ತ್ರ ಪೊಲೀಸ್ ಘಟಕಗಳು ತಮ್ಮ ಕಾರ್ಯತಂತ್ರ, ತಂತ್ರ ಮತ್ತು ನವೀಕರಣಗೊಳಿಸಲು ಒಲವು ತೋರಿಸಿದ್ದವು.
ಮಧ್ಯ ಮತ್ತು ದಕ್ಷಿಣ ಏಷ್ಯಾದಲ್ಲಿನ ಭೌಗೋಳಿಕ, ರಾಜಕೀಯ ಪರಿಸ್ಥಿತಿ ಮತ್ತು ಭಾರತದ ಗಡಿ ಮತ್ತು ಒಳನಾಡಿನ ಮೇಲೆ ಅದರ ಗಂಭೀರ ಭದ್ರತೆಯ ಪರಿಣಾಮದ ಕುರಿತು ದೇಶದಲ್ಲಿ ಗಂಭೀರ ಚಿಂತನೆಯನ್ನು ನಡೆಸಲಾಗುತ್ತದೆ.
ತಾಲಿಬಾನಿಗಳಿಗೆ ನೇರವಾಗಿ ಬೆಂಬಲ ನೀಡುತ್ತಿರುವ ಪಾಕಿಸ್ತಾನ ಕಾಶ್ಮೀರ ವಿಷಯದಲ್ಲಿ ತಾಲಿಬಾನ್ ಉಗ್ರರನ್ನು ಬಳಸಿಕೊಂಡು ಭಾರತದ ವಿರುದ್ಧ ಪಿತೂರಿ ನಡೆಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಹೀಗಾಗಿ ಭಾರತದ ಭದ್ರತಾ ಪಡೆಗಳು ಹೊಸ ತರಬೇತಿ ಮಾಡ್ಯೂಲ್ ಮೂಲಕ ತಾಲಿಬಾನ್ ಅನ್ನು ಎದುರಿಸುವ ತಂತ್ರ ರೂಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.