ಗುವಾಹಟಿ: ಗ್ರಾಮೀಣಾಭಿವೃದ್ಧಿ, ಅರಣ್ಯ ಹಕ್ಕುಗಳ ರಕ್ಷಣೆ ಮತ್ತು ಸ್ಥಳೀಯ ಜನರ ಜನಾಂಗೀಯ ಪದ್ಧತಿಗಳಿಗೆ ಒತ್ತು ನೀಡಿ ಕೇಂದ್ರವು ದೇಶಾದ್ಯಂತದ 36,000 ಕುಗ್ರಾಮಗಳನ್ನು “ಮಾದರಿ ಬುಡಕಟ್ಟು ಗ್ರಾಮ”ಗಳಾಗಿ ಪರಿವರ್ತಿಸಲು ಯೋಜಿಸುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಸೋಮವಾರ ಹೇಳಿದ್ದಾರೆ.
ಈ ಗ್ರಾಮಗಳಲ್ಲಿ 1,700 ಅಸ್ಸಾಂನಲ್ಲಿರಲಿದೆ ಎಂದ ಬುಡಕಟ್ಟು ವ್ಯವಹಾರಗಳ ಸಚಿವರು, ನಾವು ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಯೋಜಿಸುತ್ತಿದ್ದೇವೆ, ಗ್ರಾಮೀಣ ಅಭಿವೃದ್ಧಿ, ಜನಾಂಗೀಯ ಅಥವಾ ಸ್ವಾಯತ್ತ ವ್ಯವಸ್ಥೆಗಳ ರಕ್ಷಣೆ, ಅರಣ್ಯ ಹಕ್ಕುಗಳು ಮತ್ತು ಉದ್ಯಮಶೀಲತೆಯಂತಹ ವಿವಿಧ ಅಂಶಗಳಿಗೆ ಇಲ್ಲಿ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.
ಈ ಕಾರ್ಯಕ್ರಮದ ಅಡಿಯಲ್ಲಿ, ಆಯ್ದ ಗ್ರಾಮಗಳಲ್ಲಿ ಮೂಲ ಸೌಕರ್ಯಗಳನ್ನು ಸುಧಾರಿಸಲಾಗುವುದು ಎಂದು ಅವರು ಹೇಳಿದ್ದಾರೆ.
“ನಾವು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮರೊಂದಿಗೆ ಚರ್ಚಿಸಿದ್ದೇವೆ. ಶೇಕಡ 50 ಕ್ಕಿಂತ ಹೆಚ್ಚು ಬುಡಕಟ್ಟು ಜನಸಂಖ್ಯೆ ಹೊಂದಿರುವ ಗ್ರಾಮಗಳಿಗೆ ಉದ್ದೇಶಿತ ಕಾರ್ಯಕ್ರಮಕ್ಕೆ ಆದ್ಯತೆ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.
ಬುಡಕಟ್ಟು ಸಮುದಾಯಗಳ ಸಮಗ್ರ ಅಭಿವೃದ್ಧಿಯ ಗುರಿಯೊಂದಿಗೆ ಸಚಿವಾಲಯವು ಎಲ್ಲಾ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಅವರು ಹೇಳಿದರು.
ಭೇಟಿಯ ಸಮಯದಲ್ಲಿ, ಮಿನಿಸ್ಟರ್ ಫಾರೆಸ್ಟ್ ಪ್ರೊಡ್ಯೂಸ್ ಮಾರ್ಕೆಟಿಂಗ್ ಫಾರ್ ಮೆಕ್ಯಾನಿಸಂ ಮತ್ತು ವನ್ ಧನ್ ಸ್ವಸಹಾಯ ಗುಂಪುಗಳು ಸೇರಿದಂತೆ ಬುಡಕಟ್ಟು ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.
“ರಾಜ್ಯದ ಬುಡಕಟ್ಟು ಫಲಾನುಭವಿಗಳು ಅಭಿವೃದ್ಧಿಪಡಿಸಿದ 25 ಕ್ಕೂ ಹೆಚ್ಚು ಉತ್ಪನ್ನಗಳನ್ನು ನನಗೆ ತೋರಿಸಲಾಗಿದೆ. ಇದು ತುಂಬಾ ಉತ್ತೇಜನಕಾರಿಯಾಗಿದೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.