ಬೆಂಗಳೂರು: ಪೆಟ್ರೋಲ್ ಮತ್ತು ಡಿಸೇಲ್ ಅನ್ನು ಜಿಎಸ್ಟಿ ಅಡಿಯಲ್ಲಿ ಸೇರಿಸದಂತೆ ಮತ್ತು ಜಿಎಸ್ಟಿ ಪರಿಹಾರವನ್ನು ಮುಂದಿನ 5 ವರ್ಷಗಳಿಗೆ ವಿಸ್ತರಣೆ ಮಾಡುವಂತೆ ರಾಜ್ಯದ ಜಿಎಸ್ಟಿ ತಂಡವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.
45 ನೇ ಜಿಎಸ್ಟಿ ಮಂಡಳಿಯ ಸಭೆ ನಿನ್ನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದ್ದು, ಈ ಸಭೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಅನ್ನು ಜಿಎಸ್ಟಿ ವ್ಯಾಪ್ತಿಯಡಿಗೆ ತರುವ ಸಂಬಂಧ ಚರ್ಚೆ ನಡೆದಿದೆ. ಈ ಸಭೆಯಲ್ಲಿ ರಾಜ್ಯದ ವಾಣಿಜ್ಯ ತೆರಿಗೆಗಳ ಆಯುಕ್ತರಾದ ಸಿ. ಶಿಖಾ, ರವಿ ಪ್ರಸಾದ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಈ ಸಂದರ್ಭದಲ್ಲಿ ಕರ್ನಾಟಕವೂ ಸೇರಿದಂತೆ ಇನ್ನೂ ಹಲವು ರಾಜ್ಯಗಳು ಪೆಟ್ರೋಲ್, ಡಿಸೇಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದವು.
ಹಾಗೆಯೇ ಕೊರೋನಾ ಹಿನ್ನೆಲೆಯಲ್ಲಿ ಆರ್ಥಿಕತೆಯ ಮೇಲೆ ಹೊಡೆತ ಬಿದ್ದಿದ್ದು, ಜಿಎಸ್ಟಿ ಪರಿಹಾರವನ್ನು. ಮುಂದಿನ 5 ವರ್ಷಗಳಿಗೆ ವಿಸ್ತರಣೆ ಮಾಡುವಂತೆ ಕರ್ನಾಟಕವೂ ಸೇರಿದಂತೆ ಇನ್ನಿತರ ರಾಜ್ಯಗಳು ಮನವಿ ಮಾಡಿದವು. ಈ ಕುರಿತು ಪರಿಶೀಲನೆ ನಡೆಸಲು 2 ಸಮಿತಿಗಳನ್ನು ರಚಿಸುವುದಾಗಿಯೂ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.