ನವದೆಹಲಿ: ಕೇಂದ್ರ ಸರ್ಕಾರದ ಎಲ್ಲಾ ರೀತಿಯ ವಿದ್ಯುತ್ ಸಂಬಂಧಿತ ಯೋಜನೆಗಳ ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ ಎಂದು ಕೇಂದ್ರ ಇಂಧನ ಸಚಿವಾಲಯವು ತಿಳಿಸಿದೆ.
ಜಿಲ್ಲೆಯ ಅತ್ಯಂತ ಹಿರಿಯ ಸಂಸದರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು; ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಇದರ ಸದಸ್ಯರಾಗಿರುತ್ತಾರೆ. ಜಿಲ್ಲಾಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಜನರಿಗೆ ವಿದ್ಯುತ್ ಸೇವೆಗಳ ಪೂರೈಕೆಯ ಪರಿಣಾಮವನ್ನೂ ಸಹ ಸಮಿತಿ ಪರಿಶೀಲಿಸಲಿದೆ ಎಂದು ಸಚಿವಾಲಯವು ಮಾಹಿತಿ ನೀಡಿದೆ.
ದೇಶದಲ್ಲಿ ವಿದ್ಯುತ್ ವಲಯದ ಸುಧಾರಣೆ, ಅವುಗಳ ಅನುಷ್ಠಾನ ಪ್ರಕ್ರಿಯೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಮತ್ತು ಮೇಲ್ವಿಚಾರಣೆಯನ್ನು ಖಾತ್ರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಸಮಿತಿಯು ಸರ್ಕಾರದ ವಿದ್ಯುತ್ ಯೋಜನೆಗಳಿಗೆ ಅನುಗುಣವಾಗಿ ಜಿಲ್ಲೆಗಳ ವಿದ್ಯುತ್ ಸರಬರಾಜು ಮೂಲಸೌಕರ್ಯದ ಒಟ್ಟಾರೆ ಅಭಿವೃದ್ಧಿ ಪರಿಶೀಲನೆ, ಸಮನ್ವಯಗೊಳಿಸುವ ಕೆಲಸವನ್ನು ಮಾಡಲಿವೆ. ಕನಿಷ್ಠ ಮೂರು ತಿಂಗಳಿಗೊಮ್ಮೆ ಜಿಲ್ಲಾ ಕೇಂದ್ರಗಳಲ್ಲಿ ಈ ಸಮಿತಿ ಸಭೆ ಸೇರಬೇಕು ಎಂದು ಈ ಆದೇಶದಲ್ಲಿ ಸಚಿವಾಲಯವು ಸೂಚಿಸಿದೆ. ದೇಶದಲ್ಲಿ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕ್ರಮ ಹೆಚ್ಚು ಅನುಕೂಲಕಾರಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.