ಮಂಗಳೂರು: ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡಲಾಗುವ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿಗೆ ನಗರದ ಸುರತ್ಕಲ್ನ ಗೋವಿಂದ ದಾಸ್ ಕಾಲೇಜಿನ ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಬಿಂದಿಯಾ ಎಲ್. ಶೆಟ್ಟಿ ಅವರು ಭಾಜನರಾಗಿದ್ದಾರೆ.
ಅವರಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೆ. 24 ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಪ್ರಶಸ್ತಿ ಪ್ರದಾನಿಸಲಿದ್ದಾರೆ.
ಬಿಂದಿಯಾ ಅವರು ಕಟ್ಲ ಲೀಲಾಧರ ಶೆಟ್ಟಿ – ಸುಜಾತ ಶೆಟ್ಟಿ ದಂಪತಿಯ ಪುತ್ರಿ. ಇವರು ಎಸ್ಎಸ್ಎಲ್ಸಿ ಮತ್ತು ಪಿಯುಸಿಗಳಲ್ಲಿ ರಾಜ್ಯದಲ್ಲೇ ಐದನೇ ಸ್ಥಾನ ಪಡೆದಿದ್ದರು. ಪ್ರಸ್ತುತ ಸಿ.ಎ. ವ್ಯಾಸಂಗವನ್ನು ಸಹ ಮಾಡುತ್ತಿರುವ ಬಿಂದಿಯಾ ಅನೇಕ ಸಂಘ ಸಂಸ್ಥೆಗಳಿಂದಲೂ ಗೌರವಿಸಲ್ಪಟ್ಟಿದ್ದಾರೆ.
ಇವರು 2019 ರಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.