ನವದೆಹಲಿ: ಸರ್ಕಾರ ದೇಶದ ಕಸವನ್ನು ಸ್ವಚ್ಛ ಮಾಡಲು ಅದರಲ್ಲೂ ಏಕ ಬಳಕೆ ಪ್ಲಾಸ್ಟಿಕ್ ತೆರವು ಮಾಡಲು ರಾಷ್ಟ್ರವ್ಯಾಪಿ 2021 ರ ಅ. 1 ರಿಂದ 31ರವರೆಗೆ ಒಂದು ತಿಂಗಳ ಕಾಲ ಕ್ಲೀನ್ ಇಂಡಿಯಾ ಅಭಿಯಾನವನ್ನು ಆಯೋಜಿಸಿದೆ.
ಈ ಸಂಬಂಧ ಕೇಂದ್ರ ಯುವ ಜನ ವ್ಯವಹಾರ ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಟ್ವೀಟ್ ಮಾಡಿದ್ದು, ನಾವು 75 ನೇ ಸ್ವಾತಂತ್ರ್ಯದ ವರ್ಷವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತವನ್ನು ಕಸಮುಕ್ತ ಮತ್ತು ಪ್ಲಾಸ್ಟಿಕ್ ಮುಕ್ತಗೊಳಿಸಿ, ಗಾಂಧೀಜಿ ಅವರ ಕನಸಿನ ಭಾರತ ನಿರ್ಮಾಣ ಮತ್ತು ಪ್ರಧಾನಮಂತ್ರಿ ಮೋದಿ ಅವರ ಪರಮೋಚ್ಛ ಆದ್ಯತೆಯಾದ ಸ್ವಚ್ಛ ಭಾರತದ ದೃಷ್ಟಿಕೋನದ ಸಾಕಾರಕ್ಕಾಗಿ ಇದು ನಮ್ಮ ಸಂಕಲ್ಪ ಎಂದು ತಿಳಿಸಿದ್ದಾರೆ. ಸಂಕಲ್ಪದಿಂದ ಸಿದ್ಧಿ ಗುರಿಯೊಂದಿಗೆ ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಗುರಿಸಾಧಿಸಲು ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.
ಇದು ವಿಶ್ವದ ಅತಿ ದೊಡ್ಡ ಸ್ವಚ್ಛತಾ ಅಭಿಯಾನವಾಗಿದೆ ಎಂದು ತಿಳಿಸಿರುವ ಅನುರಾಗ್ ಠಾಕೂರ್, ಇದರಲ್ಲಿ ದೇಶದ ವಿವಿಧ ಭಾಗಳಿಂದ 75 ಲಕ್ಷ ಟನ್ ತ್ಯಾಜ್ಯ ಅದರಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಮಾಡಿ, ತ್ಯಾಜ್ಯದಿಂದ ಸಂಪತ್ತು ಮಾದರಿಯಲ್ಲಿ ಸಂಸ್ಕರಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಅಭಿಯಾನವು “ಸ್ವಚ್ಛ ಭಾರತ: ಸುರಕ್ಷಿತ ಭಾರತ” ಮಂತ್ರದ ಪ್ರಚಾರ ಮಾಡಲಿದೆ ಎಂದರು.
ವ್ಯಕ್ತಿಗಳು, ಸಂಸ್ಥೆಗಳು, ಎಲ್ಲ ಬಾಧ್ಯಸ್ಥರು ಈ ಕೆಳಗಿನ ಲಿಂಕ್ ನಲ್ಲಿ ನೋಂದಾಯಿಸಿಕೊಂಡು ಈ ಅಭಿಯಾನದಲ್ಲಿ ಭಾಗಿಯಾಗಬಹುದು ಎಂದು ತಿಳಿಸಿದ್ದಾರೆ.
https://docs.google.com/forms/d/e/1FAIpQLSfnk5KMQ_bvtk1cFe56oCya0p3semGoKY5vEOJDdPtxzWAdaA/viewform
स्वच्छता सर्वोच्च है।#AzadiKaAmritMahotsav में आपसी सहयोग से देश को प्लास्टिक कूड़े से आजादी दिलाने के लिए संकल्प से सिद्धि मूल मंत्र द्वारा 1 से 31 अक्टूबर तक चलने वाले #CleanIndia कार्यक्रम से जुड़ें।
रजिस्टर करें :👇🏻https://t.co/FkYaHYRfC5
| @IndiaSports @Nyksindia | pic.twitter.com/uc4b60pIDs
— Anurag Thakur (@ianuragthakur) September 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.