ನವದೆಹಲಿ: ಇಂದು ಅಕ್ಟೋಬರ್ 2 ಮಹಾತ್ಮ ಗಾಂಧಿಯವರ ಜನ್ಮ ದಿನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪಿತನಿಗೆ ಗೌರವ ನಮನಗಳನ್ನು ಸಲ್ಲಿಸಿದರು.
ಗಾಂಧೀಜಿಯವರ ಉದಾತ್ತ ತತ್ವಗಳು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಟ್ವಿಟ್ಟರ್ ಮಾಡಿದ ಮೋದಿ, “ಗಾಂಧಿ ಜಯಂತಿಯಂದು ನಾನು ಗೌರವಾನ್ವಿತ ಬಾಪುಗೆ ಶಿರಬಾಗಿ ನಮಿಸುತ್ತೇನೆ. ಅವರ ಉದಾತ್ತ ತತ್ವಗಳು ಜಾಗತಿಕವಾಗಿ ಪ್ರಸ್ತುತವಾಗಿದ್ದು, ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತವೆ” ಎಂದು ಹೇಳಿದ್ದಾರೆ.
राष्ट्रपिता महात्मा गांधी को उनकी जन्म-जयंती पर विनम्र श्रद्धांजलि। पूज्य बापू का जीवन और आदर्श देश की हर पीढ़ी को कर्तव्य पथ पर चलने के लिए प्रेरित करता रहेगा।
I bow to respected Bapu on Gandhi Jayanti. His noble principles are globally relevant and give strength to millions.
— Narendra Modi (@narendramodi) October 2, 2021
ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಪ್ರಧಾನಿ ಜಲ ಜೀವನ ಮಿಷನ್ ಆಪ್ ಅನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಗ್ರಾಮ ಪಂಚಾಯತ್ಗಳು ಮತ್ತು ಜಲ ಸಮಿತಿಗಳು/ ಗ್ರಾಮ ಜಲ ಮತ್ತು ನೈರ್ಮಲ್ಯ ಸಮಿತಿಗಳೊಂದಿಗೆ (ವಿಡಬ್ಲ್ಯೂಎಸ್ಸಿ) ಜಲ ಜೀವನ ಮಿಷನ್ ಅಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಗಾಂಧಿ ಜಯಂತಿ ಆಚರಣೆಯ ಭಾಗವಾಗಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕವರಟ್ಟಿಯಲ್ಲಿ (ಲಕ್ಷದ್ವೀಪ) ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.