ಬೆಂಗಳೂರು: ಅ. 20 – 25 ರ ವರೆಗೆ ಬಂಡೀಪುರ ಹುಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಗಳ ಗಣತಿ ಆರಂಭವಾಗಲಿದೆ.
ಈ ಗಣತಿ ಕಾರ್ಯಾಚರಣೆಯನ್ನು ಕ್ಯಾಮೆರಾ ಮತ್ತು ಸಿಬ್ಬಂದಿ ಲಭ್ಯತೆಯ ಅನುಗುಣವಾಗಿ ನಡೆಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ ವೇಳೆಗೆ ಈ ಗಣತಿ ಕಾರ್ಯ ಮುಗಿದು, ಅದರ ವರದಿಯನ್ನು ಭಾರತೀಯ ವನ್ಯಜೀವಿ ಸಂಸ್ಥೆ ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ಕಳುಹಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಈ ಗಣತಿ ಕಾರ್ಯ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಬಾರಿ ವಾರ್ಷಿಕವಾಗಿ ಆಂತರಿಕ ಮೌಲ್ಯಮಾಪನ ನಡೆಸಲಾಗದ ಕಾರಣ, ಜೂನ್, ಜುಲೈ ತಿಂಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಈ ಸಂಬಂಧ ಎನ್ಸಿಟಿಎ ಜೊತೆಗೂ ಚರ್ಚಿಸಲಾಗಿದೆ. ಯಾವುದೇ ದೋಷಗಳು ಕಂಡು ಬಾರದ ಹೊರತಾಗಿ ಮರುಮೌಲ್ಯಮಾಪನ ನಡೆಸುವ ಅಗತ್ಯ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.