ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಫೈಜಾಬಾದ್ ರೈಲ್ವೇ ಜಂಕ್ಷನ್ ಹೆಸರನ್ನು ಅಯೋಧ್ಯ ಕಂಟೋನ್ಮೆಂಟ್ ಎಂದು ಬದಲಾಯಿಸಿದ್ದಾರೆ. ಈ ಬಗ್ಗೆ ಅವರ ಕಚೇರಿ ಶನಿವಾರ ಮಾಹಿತಿ ನೀಡಿದೆ.
ಯುಪಿ ಸಿಎಂಒ ತನ್ನ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಈ ಸುದ್ದಿಯನ್ನು ಹಂಚಿಕೊಂಡಿದೆ.
ಈ ಹಿಂದೆ 2018 ರಲ್ಲಿ ಉತ್ತರ ಪ್ರದೇಶ ಸಂಪುಟವು ಫೈಜಾಬಾದ್ ಮತ್ತು ಅಲಹಾಬಾದ್ ವಿಭಾಗಗಳನ್ನು ಕ್ರಮವಾಗಿ ಅಯೋಧ್ಯೆ ಮತ್ತು ಪ್ರಯಾಗ್ ರಾಜ್ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಿತ್ತು. ಪ್ರಯಾಗ್ ರಾಜ್ ವಿಭಾಗವು ಪ್ರಯಾಗ್ ರಾಜ್, ಕೌಶಾಂಬಿ, ಫತೇಪುರ್ ಮತ್ತು ಪ್ರತಾಪ್ಗಢ ಜಿಲ್ಲೆಗಳನ್ನು ಒಳಗೊಂಡಿದ್ದರೆ, ಅಯೋಧ್ಯೆ ವಿಭಾಗವು ಅಯೋಧ್ಯೆ, ಅಂಬೇಡ್ಕರ್ನಗರ, ಸುಲ್ತಾನ್ಪುರ, ಅಮೇಥಿ ಮತ್ತು ಬಾರಾಬಂಕಿ ಜಿಲ್ಲೆಗಳನ್ನು ಒಳಗೊಂಡಿತ್ತು.
ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಇತ್ತೀಚೆಗೆ ಝಾನ್ಸಿ ರೈಲು ನಿಲ್ದಾಣಕ್ಕೆ ರಾಣಿ ಲಕ್ಷ್ಮೀಬಾಯಿ ಹೆಸರನ್ನು ಮರುನಾಮಕರಣ ಮಾಡಿತ್ತು.
ಯುಪಿ ರಾಜ್ಯ ಸರ್ಕಾರವು ಮುಘಲ್ಸರಾಯ್ ರೈಲು ನಿಲ್ದಾಣವನ್ನು ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಮರುನಾಮಕರಣ ಮಾಡಿದೆ.
#UPCM श्री @myogiadityanath जी ने फैजाबाद रेलवे जंक्शन का नाम “अयोध्या कैन्ट” करने का निर्णय लिया है। @spgoyal@sanjaychapps1@74_alok pic.twitter.com/P8qg4Gc2P3
— CM Office, GoUP (@CMOfficeUP) October 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.