ಲಕ್ನೋ: ಅಕ್ಟೋಬರ್ 24 ರಂದು ನಡೆದ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ಥಾನ ಜಯಿಸಿದ ಬಳಿಕ ಪಾಕಿಸ್ಥಾನದ ಪರ ಘೋಷಣೆಗಳನ್ನು ಕೂಗಿದ, ಭಾರತದ ವಿರುದ್ಧ ಪಾಕಿಸ್ಥಾನದ ವಿಜಯವನ್ನು ಆಚರಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಐದು ಜಿಲ್ಲೆಗಳಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ನಾಲ್ವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಕಛೇರಿ ತಿಳಿಸಿದೆ.
UP Police have booked 7 people in 5 districts and taken 4 people in custody for allegedly raising pro-Pak slogans or celebrating Pakistan's victory over India in the T20 Cricket World Cup match that took place on Oct 24: CMO pic.twitter.com/o1ceq5L7ED
— ANI UP (@ANINewsUP) October 27, 2021
ಇನ್ನೊಂದೆಡೆ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಭಾನುವಾರದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ಥಾನದ ವಿಜಯವನ್ನು ಆಚರಿಸಲಾಯಿತು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜಮ್ಮು ಭೇಟಿಯ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಯಿತು ಎಂದು ಹೇಳುವ ಉದ್ದೇಶಿತ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
केंद्रीय गृह मंत्री अमित शाह के कश्मीर में रहते हुए पाकिस्तानी टीम की टी20 में जीत का और हिंदुस्तान की हार का इस तरह जश्न मनाया जाय और हिंदुस्तान विरोधी नारे लगाये जाएं तो यह निश्चित ही चिंता का विषय है। केंद्र सरकार को इसे गंभीरता से लेना चाहिए।
जय हिंद!! वंदेमातरम! pic.twitter.com/EIsYBbZvu1— Sanjay Raut (@rautsanjay61) October 26, 2021
ಭಾನುವಾರ ಪಾಕಿಸ್ಥಾನವು ಭಾರತವನ್ನು 10 ವಿಕೆಟ್ಗಳಿಂದ ಸೋಲಿಸಿತು. ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ಥಾನ ಭಾರತವನ್ನು ಸೋಲಿಸುತ್ತಿರುವುದು ಇದೇ ಮೊದಲು. ಇದಾದ ಬಳಿಕ ದೇಶದ ಹಲವೆಡೆ ದೇಶದ್ರೋಹಿಗಳು ಪಾಕಿಸ್ಥಾನದ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಈ ಮೂಲಕ ತಮ್ಮ ಪ್ರೀತಿ ಯಾವತ್ತಿದ್ದರೂ ಶತ್ರು ದೇಶದೆಡೆಗೆ ಎಂಬುದನ್ನು ಸಾಬೀತುಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.