ಶ್ರೀನಗರ: 370ನೇ ವಿಧಿ ರದ್ಧತಿಯ ಬಳಿಕ ಕಾಶ್ಮೀರ ಕಣಿವೆಯಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ನಿನ್ನೆ ಶ್ರೀನಗರದಲ್ಲಿ ನಿರ್ಮಾಣ ಮಾಡಲಾದ ಶೇರ್-ಇ-ಕಾಶ್ಮೀರ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಸ್ಪೋರ್ಟ್ಸ್ ಕ್ಲಬ್ ಅನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಮೆಹ್ತಾ ಅವರು ಉದ್ಘಾಟಿಸಿದರು.
ಈ ಕ್ರೀಡಾಂಗಣ ಒಂದೇ ಸೂರಿನಡಿ ವಿವಿಧೋದ್ದೇಶ ಕ್ರೀಡಾ ವಿಭಾಗವನ್ನು ಹೊಂದಿದೆ. ಈ ಸ್ಪೋರ್ಟ್ಸ್ ಕ್ಲಬ್ ಬಿಲಿಯರ್ಡ್ಸ್, ಸ್ನೂಕರ್, ಚೆಸ್, ಕೇರಂ, ಟೇಬಲ್ ಟೆನ್ನಿಸ್, ಯೋಗ, ಕ್ರೀಡಾ ಗ್ರಂಥಾಲಯ ಮತ್ತು ನ್ಯೂಟ್ರೀಷನ್ ಮತ್ತು ಉದ್ಯಮಶೀಲತೆಗಾಗಿನ ಸೌಲಭ್ಯವಾಗಿದ್ದು. ಈ ರೀತಿಯ ಮೊದಲ ಕ್ರೀಡಾ ಸೌಲಭ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯದರ್ಶಿ, ಜಮ್ಮು ಮತ್ತು ಕಾಶ್ಮೀರ ಸ್ಪೋರ್ಟ್ಸ್ ಕೌನ್ಸಿಲ್ನ ಪ್ರಯತ್ನಗಳನ್ನು ಶ್ಲಾಘಿಸಿದರು ಮತ್ತು ಆರೋಗ್ಯಕರ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಕ್ರೀಡಾಪಟುಗಳನ್ನು ಒಂದೇ ಸೂರಿನಡಿ ತರುವ ಉದ್ದೇಶವನ್ನು ಈ ಉಪಕ್ರಮವು ಹೊಂದಿದೆ ಎಂದು ಹೇಳಿದರು. ವಿವಿಧ ಹಿನ್ನೆಲೆಯ ಕ್ರೀಡಾಪಟುಗಳ ನಡುವಿನ ಬಾಂಧವ್ಯವನ್ನು ಬೆಳೆಸುವಲ್ಲಿ ಕ್ಲಬ್ ಬಹಳ ದೂರ ಸಾಗುತ್ತದೆ ಮತ್ತು ಜಮ್ಮು ಮತ್ತು ಕಾಶ್ಮೀರದ ಯುವಕರ ಸರ್ವಾಂಗೀಣ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದು ಅವರು ಹೇಳಿದರು.
ಚಳಿಗಾಲದ ಸಂದರ್ಭದಲ್ಲಿ ಈ ಕ್ಲಬ್ ಮತ್ತು ಪಕ್ಕದ ಕ್ರೀಡಾಂಗಣವು ಕ್ರೀಡೆ ಮತ್ತು ಯುವ ಚಟುವಟಿಕೆಗಳ ಕೇಂದ್ರವಾಗಲಿದೆ ಎಂದು ಮೆಹ್ತಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.