ನವದೆಹಲಿ: ಉತ್ತರಾಖಂಡ ರಾಜ್ಯ ಇಂದು ಸಂಸ್ಥಾಪನಾ ದಿನವನ್ನು ಆಚರಣೆ ಮಾಡುತ್ತಿದೆ, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಈ ದಶಕವು ಉತ್ತರಾಖಂಡಕ್ಕೆ ಸೇರಲಿದೆ” ಎಂದು ಹೇಳಿದರು.
“ಉತ್ತರಾಖಂಡದ ಸಂಸ್ಥಾಪನಾ ದಿನದಂದು ದೇವಭೂಮಿಯ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ಆತ್ಮೀಯ ಶುಭಾಶಯಗಳು. ಕಳೆದ ಐದು ವರ್ಷಗಳಲ್ಲಿ ರಾಜ್ಯವು ಸಾಧಿಸಿದ ಪ್ರಗತಿಯೊಂದಿಗೆ, ಈ ಇಡೀ ದಶಕವು ಉತ್ತರಾಖಂಡಕ್ಕೆ ಸೇರಲಿದೆ ಎಂದು ನನಗೆ ಖಾತ್ರಿಯಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
‘‘ಇದೀಗ ಇಲ್ಲಿನ ನೀರು, ಯುವಕರ ಸಾಮರ್ಥ್ಯ ಎರಡನ್ನೂ ಬಳಸಲಾಗುತ್ತಿದೆ ಎಂಬುದಕ್ಕೆ ಉತ್ತರಾಖಂಡದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳೇ ಸಾಕ್ಷಿ, ನಿಸರ್ಗದ ಮಡಿಲಲ್ಲಿರುವ ಈ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂದು ಹಾರೈಸುತ್ತೇನೆ. ,” ಎಂದು ಪ್ರಧಾನಿ ಮತ್ತೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಉತ್ತರಪ್ರದೇಶದಿಂದ ಬೇರ್ಪಡಿಸಿ ಉತ್ತರಾಖಂಡವನ್ನು ನವೆಂಬರ್ 9, 2000 ರಂದು ಭಾರತದ 27 ನೇ ರಾಜ್ಯವಾಗಿ ರಚಿಸಲಾಯಿತು. ಇದು ಗುಡ್ಡಗಾಡು ರಾಜ್ಯ, ಇದು ಉತ್ತರದಲ್ಲಿ ಚೀನಾ (ಟಿಬೆಟ್) ಮತ್ತು ಪೂರ್ವದಲ್ಲಿ ನೇಪಾಳದೊಂದಿಗೆ ಅಂತರರಾಷ್ಟ್ರೀಯ ಗಡಿಗಳನ್ನು ಹೊಂದಿದೆ.
उत्तराखंड में विकास का जो काम हुआ है, वह इस बात का प्रमाण है कि अब पहाड़ का पानी और जवानी, दोनों यहां के काम आ रहे हैं। मेरी कामना है कि प्रकृति की गोद में बसा यह राज्य यूं ही विकास के पथ पर निरंतर अग्रसर रहे।
— Narendra Modi (@narendramodi) November 9, 2021
उत्तराखंड के स्थापना दिवस पर देवभूमि के अपने सभी भाइयों और बहनों को मेरी हार्दिक शुभकामनाएं। पिछले पांच वर्षों में प्रदेश ने जो प्रगति की है, उससे मुझे विश्वास है कि यह पूरा दशक उत्तराखंड का ही होने वाला है।
— Narendra Modi (@narendramodi) November 9, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.