ನವದೆಹಲಿ: ಅಫ್ಘಾನಿಸ್ಥಾನದ ಪರಿಸ್ಥಿತಿ ಕುರಿತು ಭಾರತವು ನಡೆಸುತ್ತಿರುವ ದೆಹಲಿ ಪ್ರಾದೇಶಿಕ ಭದ್ರತಾ ಸಂವಾದ ಇಂದು ನವದೆಹಲಿಯಲ್ಲಿ ನಡೆಯಲಿದೆ.
ಸಂವಾದವು ರಾಷ್ಟ್ರೀಯ ಭದ್ರತಾ ಸಲಹೆಗಾರರು ಅಥವಾ ಭದ್ರತಾ ಮಂಡಳಿಗಳ ಕಾರ್ಯದರ್ಶಿಗಳ ಮಟ್ಟದಲ್ಲಿ ನಡೆಯಲಿದೆ ಮತ್ತು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಇದರಲ್ಲಿ ಇರಾನ್, ಕಜಕಿಸ್ಥಾನ್, ಕಿರ್ಗಿಜ್ ಗಣರಾಜ್ಯ, ರಷ್ಯಾ, ತಜಕಿಸ್ಥಾಬ್, ತುರ್ಕಮೆನಿಸ್ಥಾನ್ ಮತ್ತು ಉಜ್ಬೇಕಿಸ್ಥಾನ್ ಭಾಗವಹಿಸಲಿವೆ. ಭಾರತವು ಪಾಕಿಸ್ಥಾನ ಮತ್ತು ಚೀನಾವನ್ನು ಸಭೆಗೆ ಆಹ್ವಾನಿಸಿತ್ತು. ಆದರೆ, ಎರಡೂ ದೇಶಗಳು ಭಾಗವಹಿಸಲು ನಿರಾಕರಿಸಿವೆ. ವೇಳಾಪಟ್ಟಿಯ ಸಮಸ್ಯೆಯಿಂದಾಗಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ, ಆದರೆ ಅಫ್ಘಾನಿಸ್ಥಾನದ ಕುರಿತು ಬಹುಪಕ್ಷೀಯ ಮತ್ತು ದ್ವಿಪಕ್ಷೀಯವಾಗಿ ಭಾರತದೊಂದಿಗೆ ಮಾತುಕತೆಗೆ ನಾವು ಮುಕ್ತವಾಗಿದ್ದೇವೆ ಎಂದು ಚೀನಾ ಹೇಳಿದೆ.
ಭಾರತದ ಈ ಸಂವಾದ ಕಾರ್ಯಕ್ರಮಕ್ಕೆ ಹಲವು ರಾಷ್ಟ್ರಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಫ್ಘಾನಿಸ್ಥಾನದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವಲ್ಲಿ ಭಾರತ ವಹಿಸುತ್ತಿರುವ ಪಾತ್ರದ ಪ್ರಾಮುಖ್ಯತೆಯನ್ನು ಇದು ಪ್ರತಿಬಿಂಬಿಸುತ್ತದೆ.
ಅಫ್ಘಾನಿಸ್ಥಾನದಲ್ಲಿ ನಡೆಯುತ್ತಿರುವ ಭದ್ರತಾ ಪರಿಸ್ಥಿತಿ, ಮೂಲಭೂತೀಕರಣ, ಉಗ್ರವಾದ, ಮಾದಕವಸ್ತು ಉತ್ಪಾದನೆ ಮತ್ತು ಕಳ್ಳಸಾಗಣೆ ಕುರಿತು ಇಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಅಫ್ಘಾನಿಸ್ಥಾನಕ್ಕೆ ಮಾನವೀಯ ನೆರವು ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.
ಈ ಉನ್ನತ ಮಟ್ಟದ ಸಂವಾದವು ಅಫ್ಘಾನಿಸ್ಥಾನದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಉಂಟಾದ ಪ್ರಾದೇಶಿಕ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುತ್ತದೆ. ಸಂಬಂಧಿತ ಭದ್ರತಾ ಸವಾಲುಗಳನ್ನು ಎದುರಿಸಲು ಮತ್ತು ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಉತ್ತೇಜಿಸುವಲ್ಲಿ ಅಫ್ಘಾನಿಸ್ಥಾನದ ಜನರನ್ನು ಬೆಂಬಲಿಸುವ ಬಗೆಯನ್ನು ಇದು ಚರ್ಚಿಸುತ್ತದೆ ಎನ್ನಲಾಗಿದೆ..
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.