ನವದೆಹಲಿ: ಚೀನಿಯರು ಭಾರತದ ಭೂಪ್ರದೇಶಕ್ಕೆ ಬಂದು ಹೊಸ ಗ್ರಾಮವನ್ನು ನಿರ್ಮಿಸುತ್ತಿದ್ದಾರೆ ಎಂಬ ವಿವಾದವು ಸತ್ಯವಲ್ಲ ಮತ್ತು ಹಳ್ಳಿಗಳನ್ನು ಚೀನಾ ತನ್ನ ಎಲ್ಎಸಿಯ ಒಳಗಡೆ ನಿರ್ಮಾಣ ಮಾಡುತ್ತಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಎಲ್ಎಸಿಯ ಭಾರತೀಯ ಭಾಗವನ್ನು ಚೀನಾ ಅತಿಕ್ರಮಿಸಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಚೀನಾ ತನ್ನ ಟಿಬೆಟ್ ಸ್ವಾಯತ್ತ ಪ್ರದೇಶ ಮತ್ತು ಭಾರತದ ಅರುಣಾಚಲ ಪ್ರದೇಶದ ನಡುವಿನ ವಿವಾದಿತ ಪ್ರದೇಶದೊಳಗೆ ದೊಡ್ಡ ಗ್ರಾಮವನ್ನು ಎಲ್ಎಸಿಯ ಪೂರ್ವ ವಲಯದಲ್ಲಿ ನಿರ್ಮಿಸಿದೆ ಎಂದು ಯುಎಸ್ ರಕ್ಷಣಾ ಇಲಾಖೆ ಹೇಳಿತ್ತು.
ಯುಎಸ್ ವರದಿಗೆ ಅಧಿಕೃತ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, ಚೀನಾ ತನ್ನ ಭೂಪ್ರದೇಶವನ್ನು ಅತಿಕ್ರಮಣ ಮಾಡುವುದನ್ನು ಭಾರತವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಅಥವಾ ಯಾವುದೇ ನ್ಯಾಯಸಮ್ಮತವಲ್ಲದ ಚೀನೀ ಹಕ್ಕುಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದೆ.
ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಮಾತನಾಡಿ, ”ಚೀನಾ ದಶಕಗಳಿಂದ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳು ಸೇರಿದಂತೆ ಗಡಿ ಪ್ರದೇಶಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ನಿರ್ಮಾಣ ಚಟುವಟಿಕೆಗಳನ್ನು ಕೈಗೊಂಡಿದೆ. ಆದರೆ ಭಾರತವು ತನ್ನ ಭೂಪ್ರದೇಶದಲ್ಲಿ ಇಂತಹಚೀನಾದ ಅಕ್ರಮ ಅತಿಕ್ರಮಣವನ್ನು ಒಪ್ಪಿಕೊಂಡಿಲ್ಲ ಅಥವಾ ಚೀನಾದ ನ್ಯಾಯಸಮ್ಮತವಲ್ಲದ ಹಕ್ಕುಗಳನ್ನು ಒಪ್ಪಿಕೊಂಡಿಲ್ಲ” ಎಂದಿದ್ದಾರೆ.
ಬಿಪಿನ್ ರಾವತ್ ಅವರು ‘ಟೈಮ್ಸ್ ನೌ ಸಮಿಟ್ 2021’ ನಲ್ಲಿ ಮಾತನಾಡಿ, “ಭಾರತಕ್ಕೆ ಸಂಬಂಧಪಟ್ಟಂತೆ, ಅಂತಹ ಯಾವುದೇ ಗ್ರಾಮಗಳ ಅಭಿವೃದ್ಧಿಯನ್ನು ಎಲ್ಎಸಿ ಭಾರತದ ಪ್ರದೇಶದಲ್ಲಿ ಚೀನಾ ಮಾಡುತ್ತಿಲ್ಲ. ಈಗ ಭುಗಿಲೆದ್ದಿರುವ ವಿವಾದ ಸತ್ಯವಲ್ಲ. ಚೀನೀಯರು ನಮ್ಮ ಪ್ರದೇಶಕ್ಕೆ ಅಡ್ಡಲಾಗಿ ಬಂದು ಹೊಸ ಗ್ರಾಮವನ್ನು ನಿರ್ಮಿಸಿದ್ದಾರೆ ಎಂಬುದು ನಿಜವಲ್ಲ” ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.