ಶ್ರೀನಗರ: ಈ ವರ್ಷ ಹಲವು ಉನ್ನತ ಕಮಾಂಡರ್ಗಳು ಸೇರಿದಂತೆ 133 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸುದ್ದಿ ಮಾಧ್ಯಮಗಳ ಜೊತೆ ಮಾತನಾಡಿದ ಕಾಶ್ಮೀರ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ವಿಜಯ್ ಕುಮಾರ್, “ಈ ವರ್ಷ ಅನೇಕ ಉನ್ನತ ಕಮಾಂಡರ್ಗಳು ಸೇರಿದಂತೆ 133 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ” ಎಂದು ಹೇಳಿದ್ದಾರೆ
ಇಂದಿನ ಕುಲ್ಗಾಮ್ ಎನ್ಕೌಂಟರ್ ಬಗ್ಗೆ ಮಾಹಿತಿ ನೀಡಿದ ಕುಮಾರ್, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ, ಅವರಲ್ಲಿ ಒಬ್ಬರು ಹಲವಾರು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
“ಇಬ್ಬರು ಭಯೋತ್ಪಾದಕರು ಶಿರಾಜ್ ಮೋಲ್ವಿ ಮತ್ತು ಯವರ್ ಭಟ್ ಇಂದು ಹತ್ಯೆಯಾಗಿದ್ದಾರೆ. ಶಿರಾಜ್ 2016 ರಿಂದ ಸಕ್ರಿಯನಾಗಿದ್ದ ಮತ್ತು ಹಲವಾರು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ. ಶ್ರೀನಗರ ಎನ್ಕೌಂಟರ್ನಲ್ಲಿ ಅಮೀರ್ ರಿಯಾಜ್ ಎಂದು ಗುರುತಿಸಲಾದ ಮತ್ತೊಬ್ಬ ಭಯೋತ್ಪಾದಕ ಹತ್ಯೆಯಾಗಿದ್ದಾನೆ” ಎಂದಿದ್ದಾರೆ.
“ಈ ಎನ್ಕೌಂಟರ್ನಲ್ಲಿ ಇನ್ನೊಬ್ಬ ಅಪರಿಚಿತ ಭಯೋತ್ಪಾದಕ ಕೊಲ್ಲಲ್ಪಟ್ಟಿದ್ದಾನೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ಸಾಮಗ್ರಿಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ. ಶೋಧ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ಮುಂದೆ ನೀಡಲಾಗುವುದು” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಗುರುವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಚವಾಲ್ಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಪ್ರಾರಂಭವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.