ನವದೆಹಲಿ: ಕ್ರಿಪ್ಟೋಕರೆನ್ಸಿಯ ದಾರಿತಪ್ಪಿಸುವ ಪಾರದರ್ಶಕವಲ್ಲದ ಜಾಹೀರಾತಿನ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕ್ರಿಪ್ಟೋಕರೆನ್ಸಿಯ ಮುಂದಿನ ಹಾದಿ ಮತ್ತು ಸಂಬಂಧಿತ ವಿಷಯಗಳ ಕುರಿತ ಸಮಗ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಅನಿಯಂತ್ರಿತ ಕ್ರಿಪ್ಟೋವನ್ನು ಹಣಕಾಸು ವಂಚನೆ ಮತ್ತು ಉಗ್ರ ಹಣಕಾಸಿಗೆ ಅನುವು ಮಾಡಿಕೊಡದಂತೆ ನೋಡಿಕೊಳ್ಳಬೇಕಾದ ಕ್ರಮಗಳ ಬಗ್ಗೆ ಇಲ್ಲಿ ಚರ್ಚೆ ನಡೆದಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಭಾರತೀಯ ರಿಸರ್ವ್ ಬ್ಯಾಂಕ್, ಹಣಕಾಸು ಸಚಿವಾಲಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯ ನಡೆಸಿದ ಸಮಾಲೋಚನಾ ಪ್ರಕ್ರಿಯೆಯ ನಂತರ ಈ ಸಭೆ ನಡೆಸಲಾಗಿದೆ. ಇದರಲ್ಲಿ ಜಾಗತಿಕ ಮತ್ತು ಭಾರತೀಯ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ.
ಮೂಲಗಳ ಪ್ರಕಾರ ಅತಿಯಾದ ಭರವಸೆ ಮತ್ತು ಪಾರದರ್ಶಕವಲ್ಲದ ಜಾಹೀರಾತಿನ ಮೂಲಕ ಯುವಕರನ್ನು ದಾರಿ ತಪ್ಪಿಸುವ ಪ್ರಯತ್ನಗಳನ್ನು ನಿಲ್ಲಿಸಬೇಕು ಎಂದು ಸರ್ಕಾರ ಬಲವಾಗಿ ಭಾವಿಸುತ್ತದೆ.
ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆಗಳು ಮನಿ ಲಾಂಡರಿಂಗ್ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವ ಮಾರ್ಗಗಳಾಗಲು ಅನುಮತಿಸಲಾಗುವುದಿಲ್ಲ ಎಂದು ಚರ್ಚಿಸಲಾಗಿದೆ.
ಕ್ರಿಪ್ಟೋ ವಿಕಸನಗೊಳ್ಳುತ್ತಿರುವ ತಂತ್ರಜ್ಞಾನ ಎಂಬ ಅಂಶವನ್ನು ಸರ್ಕಾರವು ಅರಿತುಕೊಂಡಿದ್ದು, ಆದ್ದರಿಂದಲೇ ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರವು ಈ ಕ್ಷೇತ್ರದಲ್ಲಿ ಕೈಗೊಂಡ ಕ್ರಮಗಳು ಪ್ರಗತಿಪರವಾಗಿರಬೇಕಾದ, ಭವಿಷ್ಯಕ್ಕೆ ಸರಿಹೊಂದುವಂತೆ ಇರಬೇಕಾದ ಅಗತ್ಯವಿದ್ದು, ಹೀಗಾಗಿ ಸರ್ಕಾರವು ತಜ್ಞರು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳುವುದನ್ನು ಮುಂದುವರೆಸಲಿದೆ ಎನ್ನಲಾಗಿದೆ.
ಈ ಸಮಸ್ಯೆಯು ದೇಶಗಳ ಗಡಿಗಳನ್ನು ಮೀರುದರಿಂದಾಗಿ, ಜಾಗತಿಕ ಪಾಲುದಾರಿಕೆಗಳು ಮತ್ತು ಸಾಮೂಹಿಕ ಕಾರ್ಯತಂತ್ರಗಳ ಅಗತ್ಯವಿರುತ್ತದೆ ಎಂದೂ ಸರ್ಕಾರ ಭಾವಿಸಿದೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.