ತಿರುವನಂತಪುರಂ: ಕೇರಳದ ಜನಪ್ರಿಯ ಶಬರಿಮಲೆ ದೇವಸ್ಥಾನ ಮಂಡಲ-ಮಕರವಿಳಕ್ಕು (ಮಕರ ಸಂಕ್ರಾಂತಿ) ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ತೆರೆಯಲ್ಪಟ್ಟಿದ್ದು, ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.
ಕೋವಿಡ್ ಸಾಂಕ್ರಾಮಿಕ ಮತ್ತು ಪ್ರತಿಕೂಲ ಹವಮಾನವಿದ್ದರೂ ಇಂದು ಸಾವಿರಾರು ಭಕ್ತರು ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಈ ಮೂಲಕ ಎರಡು ದಿನಗಳ ಕಾಲ ನಡೆಯಲಿರುವ ಮಂಡಲ-ಮಕರವಿಳಕ್ಕು ವಾರ್ಷಿಕ ಧಾರ್ಮಿಕ ಯಾತ್ರೆಗೆ ಚಾಲನೆ ದೊರೆತಿದೆ.
ಕೋವಿಡ್-19 ರ ಸಂಭವನೀಯ ಹರಡುವಿಕೆಯನ್ನು ಎದುರಿಸಲು ಯಾತ್ರಾರ್ಥಿಗಳಿಗೆ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಎರಡು ತಿಂಗಳ ಕಾಲ ನಡೆಯುವ ಮಂಡಲ-ಮಕರವಿಳಕ್ಕುಗಾಗಿ ಶಬರಿಮಲೆಯ ದೇಗುಲ ಸೋಮವಾರ ಸಂಜೆ ತೆರೆದಿದ್ದು, ಮಂಗಳವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇಗುಲ ಮಂಡಳಿ ಹೇಳಿದೆ.
ಶಬರಿಮಲೆಯ ಮುಖ್ಯ ಅರ್ಚಕ ಎನ್.ಪರಮೇಶ್ವರನ್ ನಂಬೂದರಿ ಅವರು ಇಂದು ಮುಂಜಾನೆ ದೇಗುಲದ ಬಾಗಿಲು ತೆರೆದು ಗರ್ಭಗುಡಿಯಲ್ಲಿ ದೀಪ ಬೆಳಗಿದ ತರುವಾಯ ಭಕ್ತರ ಯಾತ್ರೆಗೆ ಅವಕಾಶ ಕಲ್ಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.