ನ್ಯೂಯಾರ್ಕ್: ವಿಶ್ವಸಂಸ್ಥೆ ನೀಡಿರುವ ವೇದಿಕೆಗಳನ್ನು ದುರುಪಯೋಗಪಡಿಸಿಕೊಂಡಿರುವ ಪಾಕಿಸ್ಥಾನ ಭಾರತದ ವಿರುದ್ಧ ದುರುದ್ದೇಶಪೂರಿತ ಅಪಪ್ರಚಾರ ನಡೆಸಿದೆ ಎಂದು ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ಥಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಕಾಶ್ಮೀರ ಸಮಸ್ಯೆಯನ್ನು ಕೆದಕುತ್ತಿರುವ ಇಸ್ಲಾಮಾಬಾದ್ಗೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತ, ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಪ್ರದೇಶಗಳನ್ನು ತಕ್ಷಣವೇ ಖಾಲಿ ಮಾಡುವಂತೆ ತಾಕೀತು ಮಾಡಿದೆ.
“ನಾನು ಭಾರತದ ಸ್ಥಾನವನ್ನು ಪುರುಚ್ಛರಿಸಲು ಬಯಸುತ್ತೇನೆ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಸಂಪೂರ್ಣ ಕೇಂದ್ರಾಡಳಿತ ಪ್ರದೇಶಗಳಾಗಿದ್ದು,ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿರುತ್ತದೆ. ಇದು ಪಾಕಿಸ್ಥಾನದ ಅಕ್ರಮ ಆಕ್ರಮಿತ ಪ್ರದೇಶಗಳನ್ನು ಕೂಡ ಒಳಗೊಂಡಿದೆ. ತನ್ನ ಅಕ್ರಮ ವಶದಲ್ಲಿರುವ ಎಲ್ಲಾ ಪ್ರದೇಶಗಳನ್ನು ತಕ್ಷಣವೇ ಖಾಲಿ ಮಾಡುವಂತೆ ನಾವು ಪಾಕಿಸ್ಥಾನಕ್ಕೆ ಕರೆ ನೀಡುತ್ತೇವೆ” ಎಂದು ಯುಎನ್ಗೆ ಭಾರತದ ಖಾಯಂ ಮಿಷನ್ನ ಸಲಹೆಗಾರ ಡಾ ಕಾಜಲ್ ಭಟ್ ಮಂಗಳವಾರ ಹೇಳಿದ್ದಾರೆ.
ಭಾರತದ ವಿರುದ್ಧ ದುರುದ್ದೇಶಪೂರಿತ ಅಪಪ್ರಚಾರ ಮಾಡಲು ವಿಶ್ವಸಂಸ್ಥೆ ನೀಡಿದ ವೇದಿಕೆಗಳನ್ನು ಪಾಕಿಸ್ಥಾನದ ಪ್ರತಿನಿಧಿ ದುರುಪಯೋಗಪಡಿಸಿಕೊಂಡಿರುವುದು ಇದೇ ಮೊದಲಲ್ಲ ಎಂದು ಒತ್ತಿ ಹೇಳಿದ ಭಟ್, ಪಾಕಿಸ್ಥಾನದ ಪ್ರತಿನಿಧಿಗಳು ವಿಶ್ವದ ಗಮನವನ್ನು ಬೇರೆಡೆಗೆ ಸೆಳೆಯಲು ವ್ಯರ್ಥವಾಗಿ ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.
#WATCH | Counsellor/Legal Adviser at India’s Permanent Mission to the UN Dr Kajal Bhat in a strong response slamming Pakistan for again raking up the Kashmir issue at the UNSC pic.twitter.com/AmbBMFTIU1
— ANI (@ANI) November 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.