ಮಂಡ್ಯ: ಕೆಲವರು ಚುನಾವಣೆ ಭಾಷಣದಲ್ಲಿ 7-8 ಸಾವಿರ ಅನುದಾನ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ರು. ಆದರೆ ನಿಜವಾಗಿಯೂ ಮಂಡ್ಯ ಜಿಲ್ಲೆಗೆ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಸಾರ್ವಜನಿಕ ಸಭೆಯಲ್ಲಿ ಸಚಿವ ಡಾ.ನಾರಾಯಣಗೌಡ ಅವರು ಪಾಲ್ಗೊಂಡಿದ್ದರು.
ಬಿಜೆಪಿ ಸರ್ಕಾರ ಬಂದ ಮೇಲೆ ಮಂಡ್ಯ ಜಿಲ್ಲೆಗೆ ಮೂರೂವರೆ ಸಾವಿರ ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದೆ. ವಿರೋಧ ಪಕ್ಷಗಳಿಗೆ ಬಿಜೆಪಿ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಸಚಿವ ಡಾ.ನಾರಾಯಣಗೌಡ ಅವರು ಕಿಡಿಕಾರಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜು ಅವರನ್ನ ಗೆಲ್ಲಿಸಿದರೇ ಮತ್ತಷ್ಟು ಶಕ್ತಿ ಬರಲಿದೆ, ಜಿಲ್ಲೆಗೆ ಇನ್ನಷ್ಟು ಹೆಚ್ಚಿನ ಅನುದಾನ ತರಲು ಶಕ್ತಿ ಬರಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು, ಕಾರ್ಯಕಾರಿಣಿ ಸದಸ್ಯ ಸಿದ್ದರಾಮಯ್ಯ ಸೇರಿದಂತೆ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.