ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ಸಶಸ್ತ್ರ ಪಡೆಗಳ ಧ್ವಜ ದಿನದ ಮೂರನೇ ಆವೃತ್ತಿಯ ಸಂದರ್ಭದಲ್ಲಿ 2020-21 ರ ಆರ್ಥಿಕ ವರ್ಷಕ್ಕೆ ಸಶಸ್ತ್ರ ಪಡೆಗಳ ಧ್ವಜ ದಿನದ ನಿಧಿಗೆ (AFFDF) ಪ್ರಮುಖ ಕೊಡುಗೆ ನೀಡಿದವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಸಶಸ್ತ್ರ ಪಡೆಗಳು ಯಾವಾಗಲೂ ಯುದ್ಧಗಳ ಸಮಯದಲ್ಲಿ ಮತ್ತು ಗಡಿಯಾಚೆಗಿನ ಭಯೋತ್ಪಾದಕ ಚಟುವಟಿಕೆಗಳನ್ನು ಎದುರಿಸುವ ಸಂದರ್ಭದಲ್ಲಿ ಭಾರತದ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುತ್ತವೆ. ನಿವೃತ್ತ ಯೋಧರು, ವೀರ ನಾರಿಗಳು ಮತ್ತು ಅವರ ಕುಟುಂಬಗಳನ್ನು ಬೆಂಬಲಿಸುವುದು ನಮ್ಮ ನೈತಿಕ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು.
ಎಎಫ್ಎಫ್ಡಿಎಫ್ನಲ್ಲಿ ಅಮೂಲ್ಯ ಕೊಡುಗೆ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಸಚಿವರು, ಮಾಜಿ ಸೈನಿಕರು, ವೀರ ನಾರಿಗಳು ಮತ್ತು ಅವರ ಅವಲಂಬಿತರ ಪುನರ್ವಸತಿ ಮತ್ತು ಕಲ್ಯಾಣಕ್ಕಾಗಿ ಹೆಚ್ಚು ಉದಾರ ದೇಣಿಗೆ ನೀಡುವಂತೆ ಜನರಿಗೆ ಮನವಿ ಮಾಡಿದರು.
ಖಾಸಗಿಯವರು ಸರ್ಕಾರದ ನೀತಿಗಳನ್ನು ಸದುಪಯೋಗಪಡಿಸಿಕೊಂಡು ದೇಶದ ಪ್ರಗತಿಯಲ್ಲಿ ಪಾತ್ರ ವಹಿಸಬೇಕು ಎಂದ ಅವರು, ಆರ್ಥಿಕ ವರ್ಷದಲ್ಲಿ ಮೂವತ್ತೆರಡು ಕೋಟಿ ರೂಪಾಯಿಗಳ ಕೊಡುಗೆಗಳನ್ನು ಸ್ವೀಕರಿಸಲಾಗಿದೆ ಮತ್ತು ಸುಮಾರು ಮೂವತ್ತೆಂಟು ಸಾವಿರಕ್ಕೂ ಹೆಚ್ಚು ವೈಯಕ್ತಿಕ ಫಲಾನುಭವಿಗಳಿಗೆ ಸುಮಾರು 133 ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.