ನವದೆಹಲಿ: ಸದನಕ್ಕೆ ಹಾಜರಾತಿ ವಿಚಾರದಲ್ಲಿ ಸಂಸತ್ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಕಠಿಣ ಎಚ್ಚರಿಕೆ ನೀಡಿದ್ದು, ‘ನಿಮ್ಮನ್ನು ಬದಲಿಸಿಕೊಳ್ಳಿ’ ಎಂದಿದ್ದಾರೆ.
“ಮಕ್ಕಳು ಕೂಡ ಹಲವಾರು ಬಾರಿ ಹೇಳಿಸಿಕೊಳ್ಳಲು ಇಷ್ಟಪಡುವುದಿಲ್ಲ, ನಿಮ್ಮನ್ನು ಬದಲಾಯಿಸಿಕೊಳ್ಳಿ, ಇಲ್ಲವಾದರೆ ಬದಲಾವಣೆಗಳು ತನ್ನಷ್ಟಕ್ಕೆ ಆಗುತ್ತವೆ” ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಹೇಳಿದ್ದಾರೆ.
ನವದೆಹಲಿಯ ಅಂಬೇಡ್ಕರ್ ಇಂಟರ್ನ್ಯಾಶನಲ್ ಸೆಂಟರ್ನಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಈ ಮಾತನ್ನು ಹೇಳಿದ್ದಾರೆ.
ದೇಶದ ಜನರಿಗಾಗಿ ಕೆಲಸ ಮಾಡುವಂತೆ ಸಂಸದರಿಗೆ ಕಿವಿಮಾತು ಹೇಳಿದ ಅವರು, ಸೂರ್ಯ ನಮಸ್ಕಾರವನ್ನು ಮಾಡಿ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರತಿಯೊಬ್ಬರೂ ಆರೋಗ್ಯವಾಗಿರುತ್ತಾರೆ” ಎಂದಿದ್ದಾರೆ.
ಬಿಜೆಪಿ ಸಂಸದರ ಕಳಪೆ ಹಾಜರಾತಿಯ ಬಗ್ಗೆ ಪ್ರಧಾನಿ ಮೋದಿ ಅವರು ಈ ಹಿಂದೆಯೂ ಹಲವು ಬಾರಿ ಎಚ್ಚರಿಕೆ ನೀಡಿದ್ದಾರೆ.
ಸಂಸತ್ತಿನ ಸಂಕೀರ್ಣದ ಹೊರಗೆ ಮೊದಲ ಬಾರಿಗೆ ನಡೆದ ಸಭೆಯ ವಿವರಗಳನ್ನು ಹಂಚಿಕೊಂಡ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಎಲ್ಲರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಪಕ್ಷದ ಸಂಸದರಿಗೆ ಪ್ರಧಾನಿ ಹೇಳಿದ್ದಾರೆ ಎಂದಿದ್ದಾರೆ.
ಸಭೆಯ ಆರಂಭದಲ್ಲಿ, ಕೇಂದ್ರ ಸಚಿವ ಅರ್ಜುನ್ ಮುಂಡಾ ಸೇರಿದಂತೆ ಬುಡಕಟ್ಟು ಸಂಸದರು ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ‘ಜನಜಾತೀಯ ರಾಷ್ಟ್ರೀಯ ದಿವಸ್’ ಎಂದು ಆಚರಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.