ನವದೆಹಲಿ: ಕೇಂದ್ರ ಸರ್ಕಾರವು 1, 500 ಕ್ಕೂ ಹೆಚ್ಚು ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್ (ಪಿಎಸ್ಎ) ಆಮ್ಲಜನಕ ಉತ್ಪಾದನಾ ಘಟಕಗಳನ್ನು ಮಂಜೂರು ಮಾಡಿದ್ದು, ಅದರಲ್ಲಿ 1,463 ಕಾರ್ಯಾರಂಭ ಮಾಡಿದೆ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪವಾರ್ ಮಾಹಿತಿ ನೀಡಿದ್ದಾರೆ.
ನವದೆಹಲಿಯಲ್ಲಿ ರಾಷ್ಟ್ರೀಯ ಆಕ್ಸಿಜನ್ಸ್ಟೀವರ್ಡ್ಶಿಪ್ ಪ್ರೋಗ್ರಾಂ ಅನ್ನು ಉದ್ಘಾಟಿಸಿ ಮಾತನಾಡಿದ ಸಚಿವೆ ಡಾ. ಭಾರತಿ ಪವಾರ್, ದೇಶದ ಪ್ರತಿ ಜಿಲ್ಲೆಯಲ್ಲಿ ಪಿಎಂ-ಕೇರ್ಸ್ ನಿಧಿಯ ಅಡಿಯಲ್ಲಿ 1,225 PSA ಪ್ಲಾಂಟ್ಗಳನ್ನು ಸ್ಥಾಪಿಸಲಾಗಿದೆ ಮತ್ತು ಕಾರ್ಯಾರಂಭ ಮಾಡಲಾಗಿದೆ ಎಂದಿದ್ದಾರೆ.
ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ ಪಿಎಸ್ಎ ಪ್ಲಾಂಟ್ಗಳನ್ನು ಸ್ಥಾಪಿಸಲು ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳಲ್ಲಿ ಪಿಎಸ್ಎ ಪ್ಲಾಂಟ್ಗಳನ್ನು ಅಳವಡಿಸಲು ರಾಜ್ಯಗಳನ್ನು ಕೇಳಲಾಗಿದೆ ಎಂದು ಅವರು ಹೇಳಿದರು.
ಆಕ್ಸಿಜನ್ ನಿರ್ವಹಣೆ ಮತ್ತು ಆಡಳಿತದಲ್ಲಿ ತೊಡಗಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಆಕ್ಸಿಜನ್ ಸ್ಟೀವರ್ಡ್ಶಿಪ್ ಪ್ರೋಗ್ರಾಂ ಹೊಂದಿದೆ. ಸಮರ್ಪಕ ಬಳಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವೈದ್ಯಕೀಯ ಆಮ್ಲಜನಕದ ಯಾವುದೇ ವ್ಯರ್ಥವನ್ನು ತಪ್ಪಿಸಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ಒದಗಿಸಲು ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದಿದ್ದಾರೆ.
ದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಬ್ಬ ಆಕ್ಸಿಜನ್ ಸ್ಟೀವರ್ಡ್ ಅನ್ನು ಗುರುತಿಸಿ ತರಬೇತಿ ನೀಡಲು ಇದು ಉದ್ದೇಶಿಸಿದೆ. ಈ ತರಬೇತಿ ಪಡೆದ ವೃತ್ತಿಪರರು ತಮ್ಮ ಜಿಲ್ಲೆಗಳಲ್ಲಿ ಆಮ್ಲಜನಕ ಚಿಕಿತ್ಸೆ ಮತ್ತು ನಿರ್ವಹಣೆಯ ತರಬೇತಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದಿದ್ದಾರೆ..
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಕೋವಿಡ್ -19 ಸಾಂಕ್ರಾಮಿಕವು ವೈದ್ಯಕೀಯ ಆಮ್ಲಜನಕದ ಬೇಡಿಕೆಯನ್ನು ವೇಗಗೊಳಿಸುವುದಲ್ಲದೆ ಅದರ ಸಮಯೋಚಿತ ವಿತರಣೆಯ ಅಗತ್ಯವನ್ನೂ ಸಹ ಸಾರಿ ಹೇಳಿದೆ. ಆಮ್ಲಜನಕ ಉತ್ಪಾದನೆ ಮತ್ತು ವಿತರಣಾ ಕಾರ್ಯವಿಧಾನಗಳನ್ನು ಸ್ಥಾಪಿಸಲು ಮತ್ತು ಬಲಪಡಿಸಲು ಸರ್ಕಾರವು ರಾಜ್ಯಗಳನ್ನು ಬೆಂಬಲಿಸಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.