ಚಿತ್ತೂರು: ಭಾರತದ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ತಮ್ಮ ದೇಶಕ್ಕೆ ತೆರಳಿದ್ದಾರೆ.
“ಗೌರವಾನ್ವಿತ ಪ್ರಧಾನಿ ರಾಜಪಕ್ಸೆ ಅವರು ತಿರುಪತಿ ತೀರ್ಥಯಾತ್ರೆಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ದೇವರ ದರ್ಶನದ ನಂತರ ಶ್ರೀಲಂಕಾಕ್ಕೆ ತೆರಳಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನಗಳಲ್ಲಿ ವೆಂಕಟೇಶ್ವರನ ಆಶೀರ್ವಾದವನ್ನು ಕೋರಿದರು” ಎಂದು ಟ್ವೀಟ್ ಮಾಡಲಾಗಿದೆ.
ಶುಕ್ರವಾರ, ಮಹಿಂದ ರಾಜಪಕ್ಸೆ ಅವರು ತಮ್ಮ ಪತ್ನಿ ಶಿರಂತಿ ರಾಜಪಕ್ಸೆ ಅವರೊಂದಿಗೆ ಭಾರತಕ್ಕೆ ತೀರ್ಥಯಾತ್ರೆ ಕೈಗೊಂಡಿದ್ದು, ತಿರುಮಲದಲ್ಲಿರುವ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು.
ಇದಕ್ಕೂ ಮುನ್ನ ದೇವಸ್ಥಾನದ ಮಹಾದ್ವಾರಕ್ಕೆ ಆಗಮಿಸಿದ ಅವರನ್ನು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಜಂಟಿ ಕಾರ್ಯನಿರ್ವಾಹಕ ಅಧಿಕಾರಿ (ಜೆಇಒ) ವೀರಬ್ರಹ್ಮಮ್ ಮತ್ತು ಮುಖ್ಯ ವಿಜಿಲೆನ್ಸ್ ಮತ್ತು ಸೆಕ್ಯುರಿಟಿ ಆಫೀಸರ್ (ಸಿವಿಎಸ್ಒ) ಗೋಪಿನಾಥ್ ಜತ್ತಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ದರ್ಶನದ ನಂತರ ಅವರಿಗೆ ರಂಗನಾಯಕುಲ ಮಂಟಪದಲ್ಲಿ ವೇದ ಪಂಡಿತರಿಂದ ವೇದಶೀರ್ವಚನ ನೀಡಲಾಯಿತು ಮತ್ತು ತೀರ್ಥ ಪ್ರಸಾದ ಹಾಗೂ ದೇವರ ಭಾವಚಿತ್ರವನ್ನು ನೀಡಲಾಯಿತು.
ಶ್ರೀಲಂಕಾ ಪ್ರಧಾನಿಯವರ ತಿರುಮಲ ದೇವಸ್ಥಾನ ಭೇಟಿ ವೇಳೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ನಾರಾಯಣ ಸ್ವಾಮಿ ಕೂಡ ಉಪಸ್ಥಿತರಿದ್ದರು. ತಿರುಪತಿ ನಗರ ಎಸ್ಪಿ ವೆಂಕಟಪ್ಪ ನಾಯ್ಡು, ತಿರುಮಲ ದೇವಸ್ಥಾನದ ಡಿವೈಇಒ ರಮೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.