ನವದೆಹಲಿ: ಓಮಿಕ್ರಾನ್ ಪ್ರಕರಣ ಸೇರಿದಂತೆ ಕೊರೋನಾ ಹೆಚ್ಚಿರುವ, ಲಸಿಕೆ ನಿಧಾನಗತಿಯಲ್ಲಿರುವ 10 ರಾಜ್ಯಗಳಿಗೆ ಕೇಂದ್ರವು ತಂಡಗಳನ್ನು ಕಳುಹಿಸಲು ನಿರ್ಧರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ನಿನ್ನೆ ಹೊರಡಿಸಿದ ಆದೇಶದ ಪ್ರಕಾರ, ಈ 10 ರಾಜ್ಯಗಳೆಂದರೆ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಮಿಜೋರಾಂ, ಕರ್ನಾಟಕ, ಬಿಹಾರ, ಜಾರ್ಖಂಡ್ ಮತ್ತು ಪಂಜಾಬ್, ಉತ್ತರಪ್ರದೇಶ.
ಪಟ್ಟಿಯಲ್ಲಿರುವ ಪಂಜಾಬ್ ಮತ್ತು ಉತ್ತರ ಪ್ರದೇಶ ಇವೆರಡೂ ಎರಡು ತಿಂಗಳ ಅವಧಿಯಲ್ಲಿ ಚುನಾವಣೆಗಳನ್ನು ಎದುರಿಸಲಿವೆ. ಇಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚು ಇವೆ. ಯುಪಿಯ ಅಲಹಾಬಾದ್ ಹೈಕೋರ್ಟ್ ಓಮಿಕ್ರಾನ್ ಬೆದರಿಕೆಯ ಹಿನ್ನಲೆಯಲ್ಲಿ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮುಂದೂಡುವ ಬಗ್ಗೆ ಪರಿಗಣಿಸುವಂತೆ ಗುರುವಾರ ಚುನಾವಣಾ ಆಯೋಗ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೇಳಿದೆ.
ಯುಪಿ ಮತ್ತು ಇತರ ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಕೋವಿಡ್ ಕುರಿತು ಚರ್ಚಿಸಲು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರೊಂದಿಗೆ ಸೋಮವಾರ ಸಭೆ ನಿಗದಿಪಡಿಸಲಾಗಿದೆ ಎಂದು ಉನ್ನತ ಚುನಾವಣಾ ಸಂಸ್ಥೆಯ ಮೂಲಗಳು ತಿಳಿಸಿವೆ.
ಕೇಂದ್ರದ ತಂಡಗಳನ್ನು ಐದು ದಿನಗಳವರೆಗೆ ನಿಯೋಜಿಸಲಾಗುತ್ತದೆ, ಈ ಸಮಯದಲ್ಲಿ ಅದು ಪರೀಕ್ಷೆ ಮತ್ತು ಕಣ್ಗಾವಲು ಸುಧಾರಿಸಲು ಮತ್ತು ಕೋವಿಡ್-ಸೂಕ್ತ ನಡವಳಿಕೆಯನ್ನು ಜಾರಿಗೊಳಿಸಲು ರಾಜ್ಯ ಆರೋಗ್ಯ ಅಧಿಕಾರಿಗಳೊಂದಿಗೆ ಕೆಲಸ ಮಾಡಲಿದೆ. ಪ್ರತಿ ರಾಜ್ಯದಲ್ಲಿ ವ್ಯಾಕ್ಸಿನೇಷನ್ ದರಗಳನ್ನು ಪರಿಶೀಲಿಸಲಿದೆ, ಜೊತೆಗೆ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಪರಿಶೀಲಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.