ನವದೆಹಲಿ: ಜವಳಿ & ಕೈಮಗ್ಗ ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ರಾಜ್ಯದಲ್ಲಿ ಹೊಸದಾಗಿ ಜಾರಿಗೆ ತರಲು ಉದ್ದೇಶಿಸಿರುವ ಎಥೆನಾಲ್ ಪಾಲಿಸಿ, ರಾಜ್ಯದ ಕಬ್ಬು ಬೆಳೆಗಾರ ರೈತರ ಸಮಸ್ಯೆಗಳು ಹಾಗೂ ರಾಜ್ಯದ ಜವಳಿ & ಕೈಮಗ್ಗ ಉದ್ಯಮದ ಸಮಸ್ಯೆ & ಯೋಜನೆಗಳ ಬಗ್ಗೆ ಕೇಂದ್ರದ ಜವಳಿ & ಸಕ್ಕರೆ ಸಚಿವರಾದ ಪಿಯೋಷ್ ಗೋಯಲ್ ಅವರನ್ನು ನವದೆಹಲಿಯಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿಯಾಗಿ ಚರ್ಚಿಸಿದರು.
ಈ ವೇಳೆ ಮೈಸೂರು ಮೆಗಾ ಸಿಲ್ಕ್ ಕ್ಲಸ್ಟರ್ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು. ರಾಜ್ಯದ ರೇಷ್ಮೆ ಗುಣಮಟ್ಟಕ್ಕೆ ವಿಶ್ವದಾದ್ಯಂತ ಹೆಸರು ಪಡೆದಿದೆ, ಮೈಸೂರು ರೇಷ್ಮೆ ವಲಯದ ಕೇಂದ್ರ ಸ್ಥಾನವಾಗಿದೆ. ಇಲ್ಲಿ ರೇಷ್ಮೆಗೆ ಸಂಬಂಧಿಸಿದ ಕಾರ್ಯಚಟುವಟಿಕೆಗಳನ್ನು ವಿಸ್ತರಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಹಭಾಗಿತ್ವದ ಮೆಗಾ ಸಿಲ್ಕ್ ಕ್ಲಸ್ಟರ್ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ದವಾಗಿದೆ. ಯೋಜನೆಯ ಮೂಲ ಸ್ವರೂಪದಂತೆಯೇ ಅನುಷ್ಠಾನಗೊಳಿಸಲಾಗುವುದು, ಹೀಗಾಗಿ ಕೇಂದ್ರ ಸರ್ಕಾರ ಈ ಮೊದಲು ಘೋಷಿಸಿದಂತೆಯೇ ಅನುದಾನ ನೀಡಬೇಕು, ಯಾವುದೇ ಕಾರಣಕ್ಕೂ ಅನುದಾನ ಕಡಿತಗೊಳಿಸಬಾರದು ಎಂದು ಸಚಿವ ಶಂಕರ ಪಾಟೀಲ ಬ ಮುನೇನಕೊಪ್ಪ ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಪಿಯೋಷ್ ಗೋಯಲ್ ಈ ಯೋಜನೆಯ ಮೊದಲ ಹಂತದ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಪೂರ್ಣ ಪ್ರಮಾಣದಲ್ಲಿ ಅನುದಾನ ಒದಗಿಸಲಾಗುತ್ತದೆ, ಅವಶ್ಯಕತೆ ಇದ್ದಲಿ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.