ನವದೆಹಲಿ: ಪ್ರಧಾನ ಮಂತ್ರಿ ಸ್ಥಾನ ಎಂಬುದು ಕೇವಲ ಒಂದು ವ್ಯಕ್ತಿಯಲ್ಲ, ಅದೊಂದು ಸಂಸ್ಥೆ ಮತ್ತು ಪ್ರಜಾಪ್ರಭುತ್ವ. ಅಂತಹ ಸಂಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ಒಳ್ಳೆಯದಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಬುಧವಾರ ಪಂಜಾಬ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರಸ್ತೆ ಸಂಚಾರದಲ್ಲಿ ಉಂಟಾದ ಲೋಪದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗುವ ಸಲುವಾಗಿ ಉತ್ತರಕಾಂಡದ ಉತ್ತರಕಾಶಿಗೆ ಇಂದು ಭೇಟಿ ನೀಡಿದ ಸಂದರ್ಭ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಆಡಳಿತ ಇರುವ ಪಂಜಾಬ್ ರಾಜ್ಯಕ್ಕೆ ತೆರಳಿದ್ದರು. ಆದರೆ ಅಲ್ಲಿ ಅವರ ಭದ್ರತೆಯನ್ನು ನಿರ್ಲಕ್ಷ್ಯ ಮಾಡಲಾಯಿತು. ಆದರೀಗ ಕಾಂಗ್ರೆಸ್ಸಿಗರು ಮೋದಿ ಬಗ್ಗೆ ಕೆಟ್ಟ ಮಾತುಗಳನ್ನು ಆಡುತ್ತಿದ್ದಾರೆ. ಇದು ನಿಜಕ್ಕೂ ನಾಚಿಕೆಗೇಡು” ಎಂದಿದ್ದಾರೆ.
ಪ್ರಧಾನಿಯನ್ನು ನಡೆಸಿಕೊಂಡ ರೀತಿಗಾಗಿ ಕಾಂಗ್ರೆಸ್ ಪಕ್ಷವನ್ನು ಎಂದಿಗೂ ಕ್ಷಮಿಸಬೇಡಿ ಎಂದು ಅವರು ಸಮಾವೇಶದಲ್ಲಿ ನೆರೆದಿದ್ದ ಜನರಿಗೆ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.