ಬೆಂಗಳೂರು : ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ಮುಟ್ಟಿದಾಗ ಸರ್ಕಾರದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸಲು ಸರ್ವಪ್ರಯತ್ನಗಳನ್ನು ಮಾಡುವ ಕರೆ ನೀಡಿದರು. ಕೋವಿಡ್ ಒಡ್ಡಿರುವ ಸವಾಲುಗಳನ್ನು ಮೆಟ್ಟಿನಿಂತು ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತಾಗಬೇಕು. ಗ್ರಾಮ ಮಟ್ಟದಲ್ಲಿ ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸುವ ಗ್ರಾಮ ಒನ್ ಹಾಗೂ ಜನಸೇವಕ ಕಾರ್ಯಕ್ರಮಗಳನ್ನು ಜನವರಿ 26 ರಂದು ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮಗಳನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕು. ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ಮುಟ್ಟಿದಾಗ ಸರ್ಕಾರದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದು ತಿಳಿಸಿದರು.
ಮೈಸೂರಿನ ರಾಜವಂಶಸ್ಥರು ವ್ಯವಸ್ಥಿತ ಆಡಳಿತ ನೀಡಬೇಕೆಂಬ ಉದ್ದೇಶದಿಂದ ಪ್ರಗತಿಪರ ಚಿಂತನೆಯಿಂದ , ನಾಡನ್ನು ಅಭಿವೃದ್ಧಿ ಪಥದೆದೆ ಒಯ್ಯುವಂತಹ ಕೆಲಸಗಳನ್ನು ಮೈಸೂರು ಆಡಳಿತ ಸೇವೆಯ ಮೂಲಕ ಮಾಡಿದ್ದಾರೆ. ಮಹಿಳೆಯರಿಗೆ ಶಿಕ್ಷಣ, ನೀರಾವರಿ, ಬ್ಯಾಂಕ್ ಸ್ಥಾಪನೆ, ಕಾರ್ಖಾನೆಗಳು, ವಿದ್ಯುಚ್ಛಕ್ತಿ ಉತ್ಪಾದನಾ ಕಾರ್ಯಗಳನ್ನು ಪ್ರಾರಂಭಿಸಿ, ಇವುಗಳ ನಿರ್ವಹಣೆಗಾಗಿ ಈ ಸೇವೆ ಪ್ರಾರಂಭಿಸಲಾಯಿತು. ಹಳೆಯ ಕರ್ನಾಟಕ ಹಾಗೂ ನವ ಕರ್ನಾಟಕದ ಅಭಿವೃದ್ಧಿಯಲ್ಲಿ ಕರ್ನಾಟಕ ಆಡಳಿತ ಸೇವೆ ಮಹತ್ವದ ಪಾತ್ರ ವಹಿಸಿದೆ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಶ್ರೀಕಂಠಯ್ಯ, ಸಿದ್ಧಯ್ಯ ಪುರಾಣಿಕ್ ರಂತಹ ಸಾಹಿತ್ಯ ಕ್ಷೇತ್ರದ ದಿಗ್ಗಜರು ಕರ್ನಾಟಕ ಆಡಳಿತ ಸೇವೆಗೆ ಸೇರಿದವರು. ಈ ಸೇವೆಯಲ್ಲಿ ಪರಿಣತಿ, ಪ್ರತಿಭೆ ಹಾಗೂ ವ್ಯಕ್ತಿತ್ವ ವಿಕಸನದ ಸಾಧನೆಗೆ ಈ ಸೇವೆ ಸಹಕಾರ ನೀಡಿದೆ. ಯಾವುದೇ ಇಲಾಖೆಗಳಲ್ಲಿ ಸೇವೆ ಮಾಡಿದರೂ ತಮ್ಮದೇ ಆದ ಹೆಜ್ಜೆಗುರುತುಗಳನ್ನು ಮೂಡಿಸಲು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದ ಜನರ ಹಿತದೃಷ್ಟಿಯಿಂದ ಒಳ್ಳೆಯ ಆಡಳಿತ ನೀಡುವ ಜನೋಪಯೋಗಿ ಆಡಳಿತ ವ್ಯವಸ್ಥೆ, ತಳಸ್ತರದಲ್ಲಿರುವವರಿಗೆ ನ್ಯಾಯ ಒದಗಿಸುವ , ದೀನದಲಿರಿಗೆ ಸರ್ಕಾರದ ಕಾರ್ಯಕ್ರಮಗಳು ತಲುಪುವ ದಿಸೆಯಲ್ಲಿ ಕೆಎಎಸ್ ಅಧಿಕಾರಿಗಳ ಸೇವೆ ಸಲ್ಲಿಸಬೇಕು. ಕೆಳಸ್ತರದ ಅಧಿಕಾರಿಗಳು ದೊಡ್ಡ ಮಟ್ಟದ ಬದಲಾವಣೆ ತರಬಲ್ಲರು. ಕರ್ನಾಟಕವನ್ನು ಅಭಿವೃದ್ಧಿಗೊಳಿಸುವಲ್ಲಿ ಕೆಎಎಸ್ ಅಧಿಕಾರಿಗಳು ಮಹತ್ವದ ಪಾತ್ರ ವಹಿಸುತ್ತಾರೆ. ಕೆಎಎಸ್ ಅಧಿಕಾರಿಗಳ ನೇಮಕಾತಿ,ಮುಂಬಡ್ತಿ. ನಿವೃತ್ತಿ ನಂತರದ ಸವಲತ್ತುಗಳೂ ಸೇರಿದಂತೆ ಇನ್ನಿತರ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.