ನವದೆಹಲಿ: ಭಾರತದಲ್ಲಿ ಪ್ರತಿ ವರ್ಷ ಜನವರಿ 15 ಅನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸೇನೆಯ ಶೌರ್ಯ ಮತ್ತು ವೃತ್ತಿಪರತೆಯನ್ನು ಕೊಂಡಾಡಿದ್ದಾರೆ.
ಭಾರತೀಯ ಸೇನೆಯು ಶೌರ್ಯ ಮತ್ತು ವೃತ್ತಿಪರತೆಗೆ ಹೆಸರುವಾಸಿಯಾಗಿದೆ ಮತ್ತು ರಾಷ್ಟ್ರೀಯ ಸುರಕ್ಷತೆಗೆ ಅದರ ಅಮೂಲ್ಯ ಕೊಡುಗೆಯನ್ನು ವರ್ಣಿಸಲು ಪದಗಳು ಸಾಲುವುದಿಲ್ಲ. ಸಾಗರೋತ್ತರ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಸೇನೆಯ ಕೊಡುಗೆಯ ಬಗ್ಗೆ ಭಾರತವೂ ಹೆಮ್ಮೆಪಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ಭಾರತೀಯ ಸೇನೆಯ ಸಿಬ್ಬಂದಿ ಪ್ರತಿಕೂಲ ಭೂಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ನೈಸರ್ಗಿಕ ವಿಕೋಪಗಳು ಸೇರಿದಂತೆ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನಾಗರಿಕರಿಗೆ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಸಾಗರೋತ್ತರ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಸೇನೆಯ ಅಮೋಘ ಕೊಡುಗೆಯ ಬಗ್ಗೆ ಭಾರತವು ಹೆಮ್ಮೆಪಡುತ್ತದೆ” ಎಂದಿದ್ದಾರೆ.
“ಸೇನಾ ದಿನದ ಸಂದರ್ಭದಲ್ಲಿ ವಿಶೇಷವಾಗಿ ನಮ್ಮ ಧೈರ್ಯಶಾಲಿ ಸೈನಿಕರು, ಗೌರವಾನ್ವಿತ ಮಾಜಿ ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ಭಾರತೀಯ ಸೇನೆಯು ತನ್ನ ಶೌರ್ಯ ಮತ್ತು ವೃತ್ತಿಪರತೆಗೆ ಹೆಸರುವಾಸಿಯಾಗಿದೆ. ರಾಷ್ಟ್ರೀಯತೆಗೆ ಭಾರತೀಯ ಸೇನೆಯ ಅಮೂಲ್ಯ ಕೊಡುಗೆಯನ್ನು ವರ್ಣಿಸಲು ಪದಗಳು ಸಾಕಾಗುವುದಿಲ್ಲ” ಎಂದಿದ್ದಾರೆ.
Best wishes on the occasion of Army Day, especially to our courageous soldiers, respected veterans and their families. The Indian Army is known for its bravery and professionalism. Words cannot do justice to the invaluable contribution of the Indian Army towards national safety. pic.twitter.com/UwvmbVD1hq
— Narendra Modi (@narendramodi) January 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.