ಬೆಂಗಳೂರು: ಕೆಶಿಪ್, ಎಸ್.ಹೆಚ್.ಡಿ.ಪಿ. ಹಾಗೂ ಕೆಆರ್ಡಿಸಿಎಲ್ ವತಿಯಿಂದ ಅಭಿವೃದ್ಧಿಪಡಿಸಲಾಗಿದ್ದ ರಸ್ತೆಗಳ ಪೈಕಿ ಜೀವಿತಾವಧಿ ಮುಕ್ತಾಯಗೊಂಡ 1008 ಕಿ.ಮೀ. ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು.
ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಅಗತ್ಯಕ್ಕೆ ಅನುಗುಣವಾಗಿ, ಸಂಚಾರ ದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ರೂಪಿಸಬೇಕು. ಬಿಡುಗಡೆ ಗೊಳಿಸಿದ ಅನುದಾನದ ಗರಿಷ್ಠ ಸದ್ಬಳಕೆಯಾಗಬೇಕು ಎಂದು ಸೂಚಿಸಿದರು.
ರಾಜ್ಯವ್ಯಾಪಿ ವಿವಿಧ ಎಂಜಿನಿಯರಿಂಗ್ ಇಲಾಖೆಗಳ ಏಕ ರೂಪ ದರಪಟ್ಟಿಯನ್ನು ಲೋಕೋಪಯೋಗಿ ಇಲಾಖೆಯಡಿ ಜಾರಿಗೆ ತರಲಾಗುತ್ತಿದ್ದು, ಇದರಂತೆಯೇ ಸರ್ಕಾರಿ ಕಟ್ಟಡಗಳಲ್ಲಿ ಬಳಕೆಯಾಗುವ ವಸ್ತುಗಳಿಗೆ ಕೂಡ ಏಕರೂಪ ದರಪಟ್ಟಿಯನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.
ರಾಜ್ಯ ಹೆದ್ದಾರಿಗಳು ಜಿಲ್ಲಾ ಮುಖ್ಯ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳೊಂದಿಗೆ ಸಂಯೋಜನೆ(integration)ಯಾಗಬೇಕು. ಇದಕ್ಕೆ ಪೂರಕವಾಗಿ ರಸ್ತೆ ತಜ್ಞರಿಂದ ಮಾಸ್ಟರ್ ಪ್ಲಾನ್ ಸಿದ್ಧ ಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಇಲಾಖೆಯ ಒಡೆತನದ ಭೂಮಿಯಲ್ಲಿ ಕರ್ನಾಟಕ ವಸತಿ ಸಂಕೀರ್ಣ ನಿರ್ವಹಿಸಲು 45 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.