ನವದೆಹಲಿ: “ಬಡತನ ಮಾನಸಿಕ ಸ್ಥಿತಿ” ಎಂಬ ರಾಹುಲ್ ಗಾಂಧಿ ಅವರ ಹಿಂದಿನ ಹೇಳಿಕೆಯ ಮೂಲಕವೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯಸಭೆಯಲ್ಲಿ 2022-23ರ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ತಮ್ಮ ಬಜೆಟ್ ಆರ್ಥಿಕತೆಗೆ ಸ್ಥಿರತೆಯನ್ನು ತರುತ್ತದೆ ಮತ್ತು ಉದ್ಯೋಗಗಳನ್ನು ಸೃಷ್ಟಿಸುವ ಕ್ರಮಗಳನ್ನು ಹೊಂದಿದೆ ಎಂದು ಹೇಳಿದರು.
ಈ ವೇಳೆ ರಾಹುಲ್ ಗಾಂಧಿ ಹೆರಸರನ್ನು ಹೇಳದೆಯೇ ಬಜೆಟ್ ಅನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅವರು, “ದಯವಿಟ್ಟು ಸ್ಪಷ್ಟವಾಗಿ ಹೇಳಿ, ನಾನು ಪರಿಹರಿಸಬೇಕೆಂದು ನೀವು ಬಯಸುತ್ತಿರುವ ಬಡತನ ” ಮಾನಸಿಕ ಸ್ಥಿತಿಯಲ್ಲಿನ ಬಡತನವೇ?” ಎಂದು ಪ್ರಶ್ನಿಸಿದ್ದಾರೆ.
ಬಡವರನ್ನು ಅಣಕಿಸುತ್ತಿದ್ದೀರಿ ಎಂದು ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಪ್ರತಿಭಟಿಸುತ್ತಿದ್ದಂತೆ ಉತ್ತರ ನೀಡಿದ ಸೀತಾರಾಮನ್, ನಾನು ಬಡವರನ್ನು ಅಣಕಿಸುತ್ತಿಲ್ಲ, ಬಡವರನ್ನು ಲೇವಡಿ ಮಾಡಿದ ವ್ಯಕ್ತಿ ಜೊತೆ ನೀವು ನಿಮ್ಮ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.