ಬೆಂಗಳೂರು: 2021-22ನೇ ಸಾಲಿನನ್ವಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಮುಗಿದಿದೆ. ಈಗಾಗಲೇ ಆಯ್ಕೆಯಾದ ಅಭ್ಯರ್ಥಿಗಳನ್ನು ಹೊರತುಪಡಿಸಿ ಆನ್ಲೈನ್ನಲ್ಲಿ ತಪ್ಪು ಮಾಹಿತಿ ತುಂಬಿದ ಅಭ್ಯರ್ಥಿಗಳ ಅರ್ಜಿಯಲ್ಲಿ ಸರಿಪಡಿಸಲು ಫೆಬ್ರವರಿ 12, 13 ರಂದು 2 ದಿನ ಅವಕಾಶ ನೀಡಲಾಗಿದೆ ಎಂದು ಸಚಿವ ಡಾಅಶ್ವಥನಾರಾಯಣ ಅವರು ಮಾಹಿತಿ ನೀಡಿದ್ದಾರೆ.
2021-22ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಗಾರಕ್ಕೆ ಅಗತ್ಯವಿರುವ ಅರ್ಹ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಆಯೋಜಿಸಲಾಗಿದ್ದ ಮೊದಲ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಂಡಿದ್ದು, ಬಹುತೇಕ ಅಭ್ಯರ್ಥಿಗಳು ಕೌನ್ಸೆಲಿಂಗ್ನಲ್ಲಿ ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿದ್ದಾರೆ. ಉಳಿದಂತೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ತಪ್ಪುಗಳಾಗಿದ್ದಲ್ಲಿ ಸರಿಪಡಿಸಲು ಎರಡು ದಿನ ಅವಕಾಶ ನೀಡಲಾಗಿದೆ ಎಂದಿದ್ದಾರೆ.
2021-22ನೇ ಸಾಲಿನನ್ವಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಮುಗಿದಿರುತ್ತದೆ.
ಈಗಾಗಲೇ ಆಯ್ಕೆಯಾದ ಅಭ್ಯರ್ಥಿಗಳನ್ನು ಹೊರತುಪಡಿಸಿ ಆನ್ಲೈನ್ನಲ್ಲಿ ತಪ್ಪು ಮಾಹಿತಿ ತುಂಬಿದ ಅಭ್ಯರ್ಥಿಗಳ ಅರ್ಜಿಯಲ್ಲಿ ಸರಿಪಡಿಸಲು ಫೆಬ್ರವರಿ 12, 13 ರಂದು 2 ದಿನ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ: pic.twitter.com/84AsXtFaMf
— Dr. Ashwathnarayan C. N. (@drashwathcn) February 12, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.