ಬೆಂಗಳೂರು: ಜನರ ಬಳಿಗೆ ಸರ್ಕಾರವೇ ತೆರಳಿ ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಉದ್ದೇಶ. ಖುದ್ದು ಕಂದಾಯ ಮಂತ್ರಿ ಆರ್ ಅಶೋಕ್ ಅವರೇ ಇದರ ನೇತೃತ್ವವಹಿಸಿದ್ದಾರೆ. ಇದು ಆರ್ ಅಶೋಕ್ ಅವರ ಕನಸಿನ ಯೋಜನೆಗಳಲ್ಲಿ ಒಂದು.
ಉಡುಪಿ ಜಿಲ್ಲೆಯ, ಬ್ರಹ್ಮಾವರ ತಾಲೂಕಿನ ಆರೂರು, ಕೊಕ್ಕರ್ಣೆಯಲ್ಲಿ ಸಚಿವರು ಭಾಗವಹಿಸಲಿದ್ದಾರೆ. ಆರೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಚಿವ ಆರ್ ಅಶೋಕ್ ವಾಸ್ತವ್ಯ ಹೂಡಲಿದ್ದಾರೆ. ಇದಕ್ಕಿಂತ ಮೊದಲು ಕಾರ್ಕಳದ ಕಕ್ಕಂದೂರಿನಲ್ಲಿ ಕಂದಾಯ ಮೇಳ ಉದ್ಘಾಟನೆ ಮಾಡಿ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಲಿದ್ದಾರೆ ಮತ್ತು ಜಿಲ್ಲಾ ಪಂಚಾಯತಿ ಕಚೇರಿಯ ಸಭಾಂಗಣದಲ್ಲಿ ಕಡತ ಯಜ್ಞ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಗ್ರಾಮ ವಾಸ್ತವ್ಯದ ಭಾಗವಾಗಿ ಕುಡುಬಿ, ಕೊರಗ ಜನಾಂಗದವರ ಪ್ರದೇಶಗಳಿಗೆ ಭೇಟಿ ನೀಡಿ ಕುಂದುಕೊರತೆ ಆಲಿಸಲಿದ್ದಾರೆ. ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶಿಲ್ದಾರರು ಸಹ ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ.
24 ಗಂಟೆಗಳ ಕಾಲ ಹಳ್ಳಿಯಲ್ಲಿಯೇ ಇದ್ದು ಎಲ್ಲ ಅರ್ಜಿಗಳನ್ನು ಕಡ್ಡಾಯವಾಗಿ ಅಲ್ಲಿಯೇ ವಿಲೇವಾರಿ ಮಾಡುವುದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ವಿಶೇಷತೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.