ಮಂಗಳೂರು: ಶಿವಮೊಗ್ಗದಲ್ಲಿ ಮತಾಂಧ ದುಷ್ಕರ್ಮಿಗಳ ಕುಕೃತ್ಯಕ್ಕೆ ಬಲಿಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವು ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ಹರ್ಷ ಅವರ ಕುಟುಂಬಕ್ಕೆ ನೀಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಈ ಬಗ್ಗೆ ಫೇಸ್ಬುಕ್ ಹಾಗೂ ಟ್ವಿಟರ್ ಮೂಲಕ ಮಾಹಿತಿ ನೀಡಿರುವ ಭರತ್ ಶೆಟ್ಟಿ ಅವರು, ವೇತನ ಮಾತ್ರವಲ್ಲದೆ ಅಲೋವೆನ್ಸ್ ಅನ್ನು ಕೂಡ ನೀಡುತ್ತೇನೆ ಎಂದಿದ್ದಾರೆ.
“ಮತಾಂಧರ ದುಷ್ಕೃತ್ಯಕ್ಕೆ ಇಂದು ನಾವು ನಮ್ಮ ಯುವ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಈ ಸಂದರ್ಭದಲ್ಲಿ ನಾವು ಮಾಡಬಹುದಾದ ಕನಿಷ್ಠವೆಂದರೆ ಅವರ ಕುಟುಂಬವನ್ನು ಬೆಂಬಲಿಸುವುದು. ನನ್ನ 1 ತಿಂಗಳ ಸಂಬಳ ಮತ್ತು allowances ಅನ್ನು ಹರ್ಷ ಅವರ ಕುಟುಂಬಕ್ಕೆ ನೀಡುತ್ತಿದ್ದೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದ ಬೆಂಬಲಕ್ಕೆ ನಿಲ್ಲೋಣ. ನೊಂದ ಕುಟುಂಬಕ್ಕೆ ಆಸರೆಯಾಗೋಣ.” ಎಂದು ಡಾ. ಭರತ್ ಶೆಟ್ಟಿ ಬರೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.